Advertisement
ಧಾರ್ಮಿಕ

ಅನಂತ ಪದ್ಮನಾಭ ದೇವಸ್ಥಾನ | “ಬಬಿಯಾ” ಅಂತ್ಯಸಂಸ್ಕಾರ ಧಾರ್ಮಿಕ ಕಾರ್ಯಕ್ರಮ | ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ |

Share

ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ‌ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ. ಇದೀಗ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳ ಮೂಲಕ ಬಬಿಯಾ ಅಂತ್ಯಸಂಸ್ಕಾರ ಕಾರ್ಯಕ್ರಮ ಆರಂಭಗೊಂಡಿದೆ. ಬಬಿಯಾ ಅಂತಿಮ ನಮನಕ್ಕೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.

ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ‌ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.ಭಾನುವಾರ ರಾತ್ರಿ ಮೊಸಳೆ ಬಬಿಯಾ ಇಲ್ಲವಾಯಿತು. ಈ ಸುದ್ದಿ ತಿಳಿಯುತ್ತಲೇ ನೂರಾರು ಭಕ್ತರು ಆಗಮಿಸಿದರು.
ಬಬಿಯಾ ಇನ್ನಿಲ್ಲವಾದ ಸುದ್ದಿ ತಿಳಿಯುತ್ತಲೇ ಸೋಮವಾರ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಲು ತೊಡಗಿಸಿದರು. ಬಬಿಯಾಗೆ ಅಂತಿಮ ನಮನ ಸಲ್ಲಿಸಿದರು.  ಅನಂತ ಪದ್ಮನಾಭ ದೇವಸ್ಥಾನದ ಮುಂಭಾಗದಲ್ಲಿ ದಫನ ಕಾರ್ಯ ನಡೆಯಲಿದೆ. ಇದಕ್ಕೂ ಮೊದಲು ವೈದಿಕರಿಂದ ವಿಷ್ಣು ಸಹಸ್ರನಾಮ ಪಾರಾಯಣ ನಡೆದಿದೆ.  ಕುಂಟಾರು ರವೀಶ ತಂತ್ರಿಗಳು ಆಗಮಿಸಿದ್ದರು. ಕ್ಷೇತ್ರದ ತಂತ್ರಿಗಳಾದ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಕಾಸರಗೋಡು ಜಿಲ್ಲೆಯ ಸಂಸದರು, ಶಾಸಕರು ಸಹಿತ ವಿವಿಧ ಗಣ್ಯರು ಆಗಮಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

29 minutes ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

9 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

17 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

18 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago