Advertisement
ಸುದ್ದಿಗಳು

ಸರ್ಕಾರಿ ಶಾಲೆ ಮಕ್ಕಳ ಇಂಗ್ಲಿಷ್ ಕಲಿಕೆ | ಆಂಧ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಜಾರಿ | ವಿದ್ಯಾರ್ಥಿಗಳು ಇಂಗ್ಲಿಷ್ ‌ಮಾತನಾಡುವ ಶೈಲಿಗೆ ಅಚ್ಚರಿಯಾದ ಆಂಧ್ರ ಸಿಎಂ |

Share

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಶಿಕ್ಷಣವನ್ನು ಜಾರಿಗೊಳಿಸಿದ್ದಾರೆ. ಇದರ ಅನುಷ್ಠಾನದ ಪ್ರಗತಿ ತಿಳಿದುಕೊಳ್ಳುವ ಸಲುವಾಗಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಈ ವೇಳೆ ಸ್ವತಃ ತೆಲುಗು ಮಾಧ್ಯಮದಲ್ಲಿ ಓದಿ ಇಂಗ್ಲಿಷ್‌ ಮಾತನಾಡದ್ದಕ್ಕೆ ಮೂದಲಿಕೆಗೊಳಗಾಗಿದ್ದ 42ರ ಹರೆಯದ ಶಿಕ್ಷಕ ಜಿ.ವಿ. ಪ್ರಸಾದ್ ಇದನ್ನು ಸವಾಲಾಗಿ ಸ್ವೀಕರಿಸಿ ತಮ್ಮ ವಿದ್ಯಾರ್ಥಿಗಳ ಇಂಗ್ಲಿಷ್ ಕಲಿಕೆಯನ್ನು ತರಬೇತುಗೊಳಿಸಿದ್ದು, ಇದರ ವಿಡಿಯೋ ದೇಶಾದ್ಯಂತ ಗಮನ ಸೆಳೆದಿದೆ.

ಆಂಧ್ರದ ಗೋದಾವರಿ ಜಿಲ್ಲೆಯ ತೊಂಡಂಗಿ ಮಂಡಲದಲ್ಲಿರುವ ಬೆಂಡಪುಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರ ಪಾಶ್ಚ್ಯಾತ್ಯ ಶೈಲಿಯ ಸ್ಫೋಕನ್ ಇಂಗ್ಲೀಷ್, ಅವರ ಆತ್ಮವಿಶ್ವಾಸ, ಮಾತನಾಡುವ ಶೈಲಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸ್ವತಃ ಸಿಎಂ ಜಗನ್ ಮೋಹನ್ ರೆಡ್ಡಿ ವಿದ್ಯಾರ್ಥಿಗಳ ಕಾನ್ಫಿಡೆನ್ಸ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸರ್ಕಾರಿ ಶಾಲೆಗಳಲ್ಲೂ ಇಂಗ್ಲೀಷ್ ಮೀಡಿಯಂ ಜಾರಿಗೊಳಿಸುವ ಮೂಲಕ ಜಗನ್ಮೋಹನ್ ರೆಡ್ಡಿ ನೆರವಾಗಿದ್ದಕ್ಕೆ ವಿದ್ಯಾರ್ಥಿನಿಯರು ಧನ್ಯವಾದ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಇಂಗ್ಲಿಷ್ ಮಾತನಾಡುವ ಕೌಶಲ್ಯಕ್ಕಾಗಿ ತಮ್ಮ ಇಂಗ್ಲಿಷ್ ಶಿಕ್ಷಕ ಜಿ.ವಿ. ಪ್ರಸಾದ್ ಅವರನ್ನು ಗೌರವಿಸಿದ್ದಾರೆ. ಅವರು ಕಳೆದ ಕೆಲ ತಿಂಗಳಿಂದ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ವಿಡಿಯೋ ನೋಡುವಂತೆ ಮಾಡಿ ವ್ಯಾಕರಣ ಮತ್ತು ಉಚ್ಚಾರಣೆಯನ್ನು ಸರಿಪಡಿಸುವ ಮೂಲಕ ತರಬೇತಿ ನೀಡುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

7 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago