ಸುದ್ದಿಗಳು

ಸರ್ಕಾರಿ ಶಾಲೆ ಮಕ್ಕಳ ಇಂಗ್ಲಿಷ್ ಕಲಿಕೆ | ಆಂಧ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಶಿಕ್ಷಣ ಜಾರಿ | ವಿದ್ಯಾರ್ಥಿಗಳು ಇಂಗ್ಲಿಷ್ ‌ಮಾತನಾಡುವ ಶೈಲಿಗೆ ಅಚ್ಚರಿಯಾದ ಆಂಧ್ರ ಸಿಎಂ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಶಿಕ್ಷಣವನ್ನು ಜಾರಿಗೊಳಿಸಿದ್ದಾರೆ. ಇದರ ಅನುಷ್ಠಾನದ ಪ್ರಗತಿ ತಿಳಿದುಕೊಳ್ಳುವ ಸಲುವಾಗಿ ಇತ್ತೀಚೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.

Advertisement
Advertisement

ಈ ವೇಳೆ ಸ್ವತಃ ತೆಲುಗು ಮಾಧ್ಯಮದಲ್ಲಿ ಓದಿ ಇಂಗ್ಲಿಷ್‌ ಮಾತನಾಡದ್ದಕ್ಕೆ ಮೂದಲಿಕೆಗೊಳಗಾಗಿದ್ದ 42ರ ಹರೆಯದ ಶಿಕ್ಷಕ ಜಿ.ವಿ. ಪ್ರಸಾದ್ ಇದನ್ನು ಸವಾಲಾಗಿ ಸ್ವೀಕರಿಸಿ ತಮ್ಮ ವಿದ್ಯಾರ್ಥಿಗಳ ಇಂಗ್ಲಿಷ್ ಕಲಿಕೆಯನ್ನು ತರಬೇತುಗೊಳಿಸಿದ್ದು, ಇದರ ವಿಡಿಯೋ ದೇಶಾದ್ಯಂತ ಗಮನ ಸೆಳೆದಿದೆ.

ಆಂಧ್ರದ ಗೋದಾವರಿ ಜಿಲ್ಲೆಯ ತೊಂಡಂಗಿ ಮಂಡಲದಲ್ಲಿರುವ ಬೆಂಡಪುಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರ ಪಾಶ್ಚ್ಯಾತ್ಯ ಶೈಲಿಯ ಸ್ಫೋಕನ್ ಇಂಗ್ಲೀಷ್, ಅವರ ಆತ್ಮವಿಶ್ವಾಸ, ಮಾತನಾಡುವ ಶೈಲಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸ್ವತಃ ಸಿಎಂ ಜಗನ್ ಮೋಹನ್ ರೆಡ್ಡಿ ವಿದ್ಯಾರ್ಥಿಗಳ ಕಾನ್ಫಿಡೆನ್ಸ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸರ್ಕಾರಿ ಶಾಲೆಗಳಲ್ಲೂ ಇಂಗ್ಲೀಷ್ ಮೀಡಿಯಂ ಜಾರಿಗೊಳಿಸುವ ಮೂಲಕ ಜಗನ್ಮೋಹನ್ ರೆಡ್ಡಿ ನೆರವಾಗಿದ್ದಕ್ಕೆ ವಿದ್ಯಾರ್ಥಿನಿಯರು ಧನ್ಯವಾದ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಇಂಗ್ಲಿಷ್ ಮಾತನಾಡುವ ಕೌಶಲ್ಯಕ್ಕಾಗಿ ತಮ್ಮ ಇಂಗ್ಲಿಷ್ ಶಿಕ್ಷಕ ಜಿ.ವಿ. ಪ್ರಸಾದ್ ಅವರನ್ನು ಗೌರವಿಸಿದ್ದಾರೆ. ಅವರು ಕಳೆದ ಕೆಲ ತಿಂಗಳಿಂದ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ವಿಡಿಯೋ ನೋಡುವಂತೆ ಮಾಡಿ ವ್ಯಾಕರಣ ಮತ್ತು ಉಚ್ಚಾರಣೆಯನ್ನು ಸರಿಪಡಿಸುವ ಮೂಲಕ ತರಬೇತಿ ನೀಡುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…

3 hours ago

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…

3 hours ago

ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…

4 hours ago

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

11 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

12 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

13 hours ago