ನಮ್ಮ ರಾಜ್ಯದ ಹೆಮ್ಮೆಯ ವಿವಿಧ ಪ್ರಾಣಿಗಳ ಆವಸ್ಥಾನ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ. ಇಲ್ಲಿ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಅಭಯಾರಣ್ಯಕ್ಕೆ ಬಂದ ಪ್ರವಾಸಿಗರಿಗೆ ಸಫಾರಿಗೆ ತೆರಳಿದರೆನೇ ಅದರ ಮಜಾ. ಅಲ್ಲಲ್ಲಿ ವಿವಿಧ ಪ್ರಾಣಿ ಪಕ್ಷಿಗಳು ಅಗಾಗ ದರ್ಶನ ನೀಡುತ್ತವೆ. ಈ ವೇಳೆ ಕೆಲವೊಮ್ಮೆ ಕೆಲ ಪ್ರಾಣಿಗಳು ದಾಳಿ ಮಾಡುವುದು ಇದೆ. ಅಂತಹವರಿಗೆ ಸರ್ಕಾರ ವಿಮೆ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ.
ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳಿರುವ ತಾಣ ಬಂಡೀಪುರ. ಹುಲಿಗಳ ಜೊತೆಯಲ್ಲಿ ಆನೆ ಕರಡಿ, ಚಿರತೆ ಕಾಡೆಮ್ಮೆ, ಜಿಂಕೆ ಮೊದಲಾದ ಪ್ರಾಣಿಗಳ ಆವಾಸಸ್ಥಾನವಾಗಿದೆ. ಸಫಾರಿ ಸಂದರ್ಭದಲ್ಲಿ ಪ್ರವಾಸಿಗರ ವಾಹನದ ಮೇಲೆ ಕಾಡು ಪ್ರಾಣಿಗಳು ದಾಳಿ ನಡೆಸಿ ಅವಘಡ ಸಂಭವಿಸಿದರೆ ವಿಮೆ ಪರಿಹಾರ ನೀಡಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ. ಈಗಾಗಲೇ ಕಳ್ಳಬೇಟೆ ತಡೆ ಶಿಬಿರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಕಾಡು ಪ್ರಾಣಿಗಳ ದಾಳಿಗೆ ಸಾವನ್ನಪ್ಪಿದರೆ ಸಿಬ್ಬಂದಿಯ ಕುಟುಂಬಕ್ಕೆ 30 ಲಕ್ಷ ರೂಪಾಯಿ ವಿಮೆ ಪರಿಹಾರವಾಗಿ ನೀಡಲಾಗುತ್ತದೆ.
ಪ್ರವಾಸಿಗರಿಗೆ ವಿಮೆ ಸೌಲಭ್ಯ: ಇದೀಗ ವಿಮೆಯನ್ನು ಪ್ರವಾಸಿಗರಿಗೂ ವಿಸ್ತರಿಸಲು ಅರಣ್ಯ ಇಲಾಖೆ ಮುಂದಾಗಿದೆ. ಸಫಾರಿ ಶುಲ್ಕದ ಜೊತೆಗೆ 5 ರೂಪಾಯಿ ಹೆಚ್ಚುವರಿ ಪಡೆದು ವಿಮೆ ಸೌಲಭ್ಯ ನೀಡಲು ಚಿಂತನೆಯನ್ನು ಇಲಾಖೆ ಹೊಂದಿದೆ. ಈಗಾಗಲೇ ಅರಣ್ಯ ಇಲಾಖೆ ವಿಮಾ ಕಂಪನಿಗಳೊಂದಿಗೆ ಮಾತುಕತೆ ನಡೆಸಿದೆ. ಕೆಲವೇ ದಿನಗಳಲ್ಲಿ ವಿಮೆ ಯೋಜನೆ ಜಾರಿಯಾಗಲಿದೆ ಎಂದು ತಿಳಿದು ಬಂದಿದೆ.
ಬಂಡೀಪುರದಲ್ಲಿ 150 ಹುಲಿಗಳು: ಕರ್ನಾಟಕದ ಬಂಡೀಪುರ ಹುಲಿಸಂರಕ್ಷಿತ ಪ್ರದೇಶ 150 ಹುಲಿಗಳೊಂದಿಗೆ ದೇಶದಲ್ಲಿ ಎರಡನೇ ಹಾಗೂ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದೆ. ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ 141 ಹುಲಿಗಳೊಂದಿಗೆ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದೆ. 022ರ ಹುಲಿಗಣತಿ ಪ್ರಕಾರ ಬಂಡೀಪುರದಲ್ಲಿ 150, ನಾಗರಹೊಳೆಯಲ್ಲಿ141, ಭದ್ರ ಹುಲಿಸಂರಕ್ಷಿತ ಪ್ರದೇಶದಲ್ಲಿ 28, ಬಿ.ಆರ್.ಟಿ.ಯಲ್ಲಿ 37, ಕಾಳಿ ಹುಲಿಸಂರಕ್ಷಿತ ಪ್ರದೇಶದಲ್ಲಿ 17 ಹುಲಿಗಳು ಪತ್ತೆಯಾಗಿವೆ.
Source:Online Press Journal
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…