Advertisement
ಸುದ್ದಿಗಳು

ಪಶು ಸಂಗೋಪನೆ ವಲಯಕ್ಕೆ ಉತ್ತೇಜನ : ಹೈನುಗಾರರ ಆದಾಯ ಹೆಚ್ಚಿಸಲು ಕೇಂದ್ರದ ಕ್ರಮ

Share

ರಾಜ್ಯಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಪಶು ಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್, ಕೇಂದ್ರ ಸರ್ಕಾರ ಪಶು ಸಂಗೋಪನೆ ವಲಯಕ್ಕೆ ಉತ್ತೇಜನ ನೀಡುತ್ತಿದ್ದು, ಹಾಲು ಉತ್ಪಾದನೆಯ ಮೂಲಕ ರೈತರ ಆರ್ಥಿಕ ಬಲವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಹಾಲು ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ಪಶು ಸಂಗೋಪನೆ ವಲಯ ಬಹುತೇಕ ಅಸಂಘಟಿತವಾಗಿದ್ದು, ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಇದನ್ನು ಸಂಘಟಿತ ವಲಯಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ. ಪಶು ಸಂಗೋಪನೆಯಲ್ಲಿ ತೊಡಗಿರುವ ರೈತಾಪಿ ವರ್ಗಕ್ಕೆ ಹೆಚ್ಚಿನ ಲಾಭ ದೊರಕುವಂತೆ ಮಾಡುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದೇ ವೇಳೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಾತನಾಡಿ, ದೇಶದಲ್ಲಿ ನಕ್ಸಲ್ ಚಟುವಟಿಕೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನೀತಿ ರೂಪಿಸಿದ್ದು, ಆರು ಪ್ರಮುಖ ಕಾರ್ಯಕ್ರಮಗಳ ಮೂಲಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

2026ರ ಮಾರ್ಚ್ ಅಂತ್ಯದೊಳಗೆ ನಕ್ಸಲ್ ಚಟುವಟಿಕೆಯನ್ನು ನಿರ್ಮೂಲನೆ ಮಾಡುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ದೇಶದ ಜನತೆಗೆ ಭರವಸೆ ನೀಡಿದ್ದಾರೆ. ಅದನ್ನು ಪೂರೈಸುವ ನಿಟ್ಟಿನಲ್ಲಿ ಸರ್ಕಾರ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.

2014ಕ್ಕೂ ಮೊದಲು ನಕ್ಸಲ್ ಚಟುವಟಿಕೆಯನ್ನು ನಿಯಂತ್ರಿಸಲು ಸೂಕ್ತ ನೀತಿ ಇರಲಿಲ್ಲ. ಪರಿಣಾಮವಾಗಿ ಪಶುಪತಿಯಿಂದ ತಿರುಪತಿಯವರೆಗೆ ‘ಕೆಂಪು ಕಾರಿಡಾರ್’ ನಿರ್ಮಾಣವಾಗಿ ದೇಶದ ಆಂತರಿಕ ಸುರಕ್ಷತೆಗೆ ಧಕ್ಕೆ ಎದುರಾಗಿತ್ತು ಎಂದು ನಿತ್ಯಾನಂದ ರಾಯ್ ಹೇಳಿದರು. ಪ್ರಸ್ತುತ ಎಡಪಂಥೀಯ ಚಟುವಟಿಕೆಗಳ ಕುರಿತು ಕೇಂದ್ರ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿದೆ.

ನಕ್ಸಲ್ ಬಾಧಿತ 500ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದ್ದು, 10 ಸಾವಿರಕ್ಕೂ ಅಧಿಕ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ವಿವರಿಸಿದರು. ಜೊತೆಗೆ ಉನ್ನತ ಶಿಕ್ಷಣ ಸಂಸ್ಥೆಗಳು, ಕೌಶಲ ವಿಕಾಸ ಕೇಂದ್ರಗಳು, ಕೇಂದ್ರೀಯ ವಿದ್ಯಾಲಯಗಳು ಹಾಗೂ ನವೋದಯ ವಿದ್ಯಾಲಯಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

2014ರಲ್ಲಿ 10 ರಾಜ್ಯಗಳಲ್ಲಿ ನಕ್ಸಲ್ ಪ್ರಭಾವ ಇದ್ದು, ಈಗ ಅದು ಶೇಕಡಾ 70ರಷ್ಟು ಇಳಿಕೆಯಾಗಿ ಕೇವಲ ಮೂರು ರಾಜ್ಯಗಳಿಗೆ ಸೀಮಿತವಾಗಿದೆ. ಹಿಂಸಾತ್ಮಕ ಘಟನೆಗಳಲ್ಲೂ ಗಣನೀಯ ಇಳಿಕೆ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

4 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

10 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

11 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago