Advertisement
ಸುದ್ದಿಗಳು

ಪಶು ಸಂಗೋಪನೆ ವಲಯಕ್ಕೆ ಉತ್ತೇಜನ : ಹೈನುಗಾರರ ಆದಾಯ ಹೆಚ್ಚಿಸಲು ಕೇಂದ್ರದ ಕ್ರಮ

Share

ರಾಜ್ಯಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಪಶು ಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್, ಕೇಂದ್ರ ಸರ್ಕಾರ ಪಶು ಸಂಗೋಪನೆ ವಲಯಕ್ಕೆ ಉತ್ತೇಜನ ನೀಡುತ್ತಿದ್ದು, ಹಾಲು ಉತ್ಪಾದನೆಯ ಮೂಲಕ ರೈತರ ಆರ್ಥಿಕ ಬಲವನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಹಾಲು ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ಪಶು ಸಂಗೋಪನೆ ವಲಯ ಬಹುತೇಕ ಅಸಂಘಟಿತವಾಗಿದ್ದು, ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಇದನ್ನು ಸಂಘಟಿತ ವಲಯಕ್ಕೆ ತರಲು ಪ್ರಯತ್ನಗಳು ನಡೆಯುತ್ತಿವೆ. ಪಶು ಸಂಗೋಪನೆಯಲ್ಲಿ ತೊಡಗಿರುವ ರೈತಾಪಿ ವರ್ಗಕ್ಕೆ ಹೆಚ್ಚಿನ ಲಾಭ ದೊರಕುವಂತೆ ಮಾಡುವ ದಿಕ್ಕಿನಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದೇ ವೇಳೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಾತನಾಡಿ, ದೇಶದಲ್ಲಿ ನಕ್ಸಲ್ ಚಟುವಟಿಕೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನೀತಿ ರೂಪಿಸಿದ್ದು, ಆರು ಪ್ರಮುಖ ಕಾರ್ಯಕ್ರಮಗಳ ಮೂಲಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

2026ರ ಮಾರ್ಚ್ ಅಂತ್ಯದೊಳಗೆ ನಕ್ಸಲ್ ಚಟುವಟಿಕೆಯನ್ನು ನಿರ್ಮೂಲನೆ ಮಾಡುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ದೇಶದ ಜನತೆಗೆ ಭರವಸೆ ನೀಡಿದ್ದಾರೆ. ಅದನ್ನು ಪೂರೈಸುವ ನಿಟ್ಟಿನಲ್ಲಿ ಸರ್ಕಾರ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.

2014ಕ್ಕೂ ಮೊದಲು ನಕ್ಸಲ್ ಚಟುವಟಿಕೆಯನ್ನು ನಿಯಂತ್ರಿಸಲು ಸೂಕ್ತ ನೀತಿ ಇರಲಿಲ್ಲ. ಪರಿಣಾಮವಾಗಿ ಪಶುಪತಿಯಿಂದ ತಿರುಪತಿಯವರೆಗೆ ‘ಕೆಂಪು ಕಾರಿಡಾರ್’ ನಿರ್ಮಾಣವಾಗಿ ದೇಶದ ಆಂತರಿಕ ಸುರಕ್ಷತೆಗೆ ಧಕ್ಕೆ ಎದುರಾಗಿತ್ತು ಎಂದು ನಿತ್ಯಾನಂದ ರಾಯ್ ಹೇಳಿದರು. ಪ್ರಸ್ತುತ ಎಡಪಂಥೀಯ ಚಟುವಟಿಕೆಗಳ ಕುರಿತು ಕೇಂದ್ರ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿದೆ.

ನಕ್ಸಲ್ ಬಾಧಿತ 500ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ರಸ್ತೆ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದ್ದು, 10 ಸಾವಿರಕ್ಕೂ ಅಧಿಕ ಮೊಬೈಲ್ ಟವರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ವಿವರಿಸಿದರು. ಜೊತೆಗೆ ಉನ್ನತ ಶಿಕ್ಷಣ ಸಂಸ್ಥೆಗಳು, ಕೌಶಲ ವಿಕಾಸ ಕೇಂದ್ರಗಳು, ಕೇಂದ್ರೀಯ ವಿದ್ಯಾಲಯಗಳು ಹಾಗೂ ನವೋದಯ ವಿದ್ಯಾಲಯಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

2014ರಲ್ಲಿ 10 ರಾಜ್ಯಗಳಲ್ಲಿ ನಕ್ಸಲ್ ಪ್ರಭಾವ ಇದ್ದು, ಈಗ ಅದು ಶೇಕಡಾ 70ರಷ್ಟು ಇಳಿಕೆಯಾಗಿ ಕೇವಲ ಮೂರು ರಾಜ್ಯಗಳಿಗೆ ಸೀಮಿತವಾಗಿದೆ. ಹಿಂಸಾತ್ಮಕ ಘಟನೆಗಳಲ್ಲೂ ಗಣನೀಯ ಇಳಿಕೆ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 hour ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

16 hours ago