ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಡಿಸೆಂಬರ್ 29 ರಂದು ಕೌಲಾಲಂಪುರದಿಂದ ಹೊರಟಿದ್ದ ಬಾಟಿಕ್ ಏರ್ ಮಲೇಷ್ಯಾ ವಿಮಾನದಲ್ಲಿ 379 ಪ್ರಾಣಿಗಳನ್ನು ಸೂಟ್ಕೇಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. 275 ಗ್ರೀನ್ ಇಗುವಾನಾ. 91 ಫ್ರಾಗ್ ಪ್ಯಾಕ್ ಮ್ಯಾನ್ಸ್, 20 ಆಫ್ರಿಕನ್ ಸ್ಪರ್ಡ್ ಆಮೆ, 1 ಗೆಕ್ಕೋ ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ತಲುಪಿದ ನಂತರ, ಗುಪ್ತಚರ ಸುಳಿವು ಆಧರಿಸಿ ಲಗೇಜ್ ಪರಿಶೀಲನೆ ನಡೆಸಿದಾಗ ಪ್ರಯಾಣಿಕರೋರ್ವರ ಸೂಟ್ ಕೇಸ್ ನಲ್ಲಿ 379 ಪ್ರಾಣಿಗಳು ಪತ್ತೆಯಾಗಿವೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…