ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಡಿಸೆಂಬರ್ 29 ರಂದು ಕೌಲಾಲಂಪುರದಿಂದ ಹೊರಟಿದ್ದ ಬಾಟಿಕ್ ಏರ್ ಮಲೇಷ್ಯಾ ವಿಮಾನದಲ್ಲಿ 379 ಪ್ರಾಣಿಗಳನ್ನು ಸೂಟ್ಕೇಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. 275 ಗ್ರೀನ್ ಇಗುವಾನಾ. 91 ಫ್ರಾಗ್ ಪ್ಯಾಕ್ ಮ್ಯಾನ್ಸ್, 20 ಆಫ್ರಿಕನ್ ಸ್ಪರ್ಡ್ ಆಮೆ, 1 ಗೆಕ್ಕೋ ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ತಲುಪಿದ ನಂತರ, ಗುಪ್ತಚರ ಸುಳಿವು ಆಧರಿಸಿ ಲಗೇಜ್ ಪರಿಶೀಲನೆ ನಡೆಸಿದಾಗ ಪ್ರಯಾಣಿಕರೋರ್ವರ ಸೂಟ್ ಕೇಸ್ ನಲ್ಲಿ 379 ಪ್ರಾಣಿಗಳು ಪತ್ತೆಯಾಗಿವೆ.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…