ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಡಿಸೆಂಬರ್ 29 ರಂದು ಕೌಲಾಲಂಪುರದಿಂದ ಹೊರಟಿದ್ದ ಬಾಟಿಕ್ ಏರ್ ಮಲೇಷ್ಯಾ ವಿಮಾನದಲ್ಲಿ 379 ಪ್ರಾಣಿಗಳನ್ನು ಸೂಟ್ಕೇಸ್ ಮೂಲಕ ಬೆಂಗಳೂರಿಗೆ ಸಾಗಿಸಲಾಗಿತ್ತು. 275 ಗ್ರೀನ್ ಇಗುವಾನಾ. 91 ಫ್ರಾಗ್ ಪ್ಯಾಕ್ ಮ್ಯಾನ್ಸ್, 20 ಆಫ್ರಿಕನ್ ಸ್ಪರ್ಡ್ ಆಮೆ, 1 ಗೆಕ್ಕೋ ಪತ್ತೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಮಾನವು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ತಲುಪಿದ ನಂತರ, ಗುಪ್ತಚರ ಸುಳಿವು ಆಧರಿಸಿ ಲಗೇಜ್ ಪರಿಶೀಲನೆ ನಡೆಸಿದಾಗ ಪ್ರಯಾಣಿಕರೋರ್ವರ ಸೂಟ್ ಕೇಸ್ ನಲ್ಲಿ 379 ಪ್ರಾಣಿಗಳು ಪತ್ತೆಯಾಗಿವೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…