Opinion

ಅನ್ನ ಬ್ರಹ್ಮ ಸ್ವರೂಪಿ | ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಬ್ಬರೇ ಊಟ ಮಾಡಬಾರದು. ತಾಯಿ, ಪತ್ನಿ ಅಥವಾ ಮಕ್ಕಳು ಊಟವನ್ನು ಬಡಿಸಬೇಕು. ತಡರಾತ್ರಿ ಊಟ ಮಾಡಬಾರದು ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಮಧ್ಯರಾತ್ರಿಯ ಊಟವನ್ನು ರಾಕ್ಷಸ ಭೋಜನ ಎಂದು ಹೇಳಲಾಗುತ್ತದೆ. ಊಟ ಮಾಡುವಾಗ ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ಗಬಗಬನೆ ತಿನ್ನುವುದು, ಅತಿ ನಿಧಾನವಾಗಿ ಊಟ ಮಾಡುವುದು; ಇವರೆಡೂ ಸರಿಯಲ್ಲ. ಊಟಕ್ಕೆ ಕುಳಿತವರು ಬಡಿಸಿದ ಎಲ್ಲವನ್ನೂ ತಿನ್ನಬೇಕು. ಏಕೆಂದರೆ ಅನ್ನ ಎಂದರೆ ಪರಬ್ರಹ್ಮ ಸ್ವರೂಪ,

Advertisement
Advertisement

ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ನಾವು ಅನ್ನಕ್ಕಾಗಿ ಕಾಯಬೇಕೇ ಹೊರತು ಅನ್ನ ನಮಗಾಗಿ ಕಾಯಬಾರದು. ಬಡಿಸಿದ ಎಲೆಯನ್ನು ಎಂದಿಗೂ ಖಾಲಿಬಿಡಬೇಡಿ. ನೀವು ಹಾಗೆ ಮಾಡಿದರೆ ಭವಿಷ್ಯದಲ್ಲಿ ಬಡತನವನ್ನು ಎದುರಿಸುವ ಅವಕಾಶ ಇರುತ್ತದೆ.

ನಮ್ಮ ಊಟ ಹೀಗಿರಲಿ:

*ತಟ್ಟೆಯಲ್ಲಿ ಅನ್ನ ಬಡಿಸಿದ ತಕ್ಷಣ ಊಟ ಪ್ರಾರಂಭಿಸಿ.
*ಯಾವುದೇ ಕಾರಣಕ್ಕೂ ಊಟವನ್ನು ಕಾಯಿಸಬೇಡಿ
*ಊಟಕ್ಕಾಗಿ ನೀವು ಕಾಯ್ದರೆ ಪರವಾಗಿಲ್ಲ.
*ಊಟಕ್ಕೆ ಕುಳಿತಾಗ ಎಂದಿಗೂ ಎಡಗೈಯನ್ನು ನೆಲಕ್ಕೆ ಊರ ಬೇಡಿರಿ.
*ನಿಮಗೆ ಎಷ್ಟು ಅವಶ್ಯಕವೋ ಅಷ್ಟನ್ನೇ ಹಾಕಿಸಿಕೊಳ್ಳಿ.
*ತಟ್ಟೆಯಲ್ಲಿ ಎಂದಿಗೂ ಅನ್ನವನ್ನು ಚೆಲ್ಲಬೇಡಿ.
*ಊಟ ಮಾಡುವಾಗ ಊಟದ ಕೈಯನ್ನು ಜಾಡಿಸಬೇಡಿರಿ.
*ಊಟ ಮಾಡುವಾಗ ಮಾತನಾಡಬೇಡಿ. ಮಾತನಾಡುವ ಅವಶ್ಯಕತೆಯಿದ್ದರೆ ಅವಶ್ಯಕತೆ ಇದ್ದಷ್ಟೇ ಮಾತನಾಡಿ.
*ನಡುನಡುವೆ ನೀರು ಕುಡಿಯಿರಿ. ಇದು ಆಹಾರದ ಪಚನ ಕ್ರಿಯೆಗೆ ಸಹಕಾರಿ.
*ಅಡುಗೆಯನ್ನು ಮನೆಯವರು – ಅಮ್ಮ-ಅಕ್ಕ-ಹೆಂಡತಿ ಬಹಳಷ್ಟು ಇಷ್ಟಪಟ್ಟು ಶ್ರಮ ವಹಿಸಿ ತಯಾರಿಸಿರುತ್ತಾರೆ ಎಂಬುದನ್ನು ಎಂದಿಗೂ ಮರೆಯಬೇಡಿ. ಅವರಿಗೆ ಅವಮಾನವಾಗುವಂತೆ ಅಡುಗೆಯ ಬಗ್ಗೆ ವಿಮರ್ಶೆ ಮಾಡಬೇಡಿ.
*ಉಣ್ಣುವಾಗ ತಟ್ಟೆಯ ಕೆಳಗೆ ಅನ್ನವನ್ನು ಚೆಲ್ಲಿಕೊಂಡು ಉಣ್ಣಬೇಡಿ.
*ಆಕಸ್ಮಾತಾಗಿ ತುತ್ತು ಕೆಳಕ್ಕೆ ಬಿದ್ದರೆ ಯಾವುದೇ ಸಂಕೋಚವಿಲ್ಲದೆ ಎತ್ತಿಕೊಂಡು, ಕಣ್ಣಿಗೆ ಒತ್ತಿಕೊಂಡು ಬಾಯಿಗೆ ಹಾಕಿಕೊಳ್ಳಿ.
*ತುತ್ತಿನ ಬಗ್ಗೆ ಅಲಕ್ಷ್ಯ, ತಾತ್ಸಾರ ಮಾಡಿದರೆ ಮುಂದೊಂದು ದಿನ ಒಂದೊಂದು ತುತ್ತಿಗೂ ಪರದಾಡಬೇಕಾದೀತು.
*ಉಣ್ಣುವಾಗ ನಿಮ್ಮ ಎಂಜಿಲನ್ನು ಪಕ್ಕದ ತಟ್ಟೆಗೆ ಹಾಕುವುದು ಅಥವಾ ಅವರಿಂದ ನೀವು ತೆಗೆದುಕೊಳ್ಳುವುದನ್ನು ಮಾಡಬೇಡಿ.
*ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ.

(Social Media)

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

5 minutes ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

8 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

14 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago