Advertisement
Opinion

ಅನ್ನ ಬ್ರಹ್ಮ ಸ್ವರೂಪಿ | ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ…!

Share

ಒಬ್ಬರೇ ಊಟ ಮಾಡಬಾರದು. ತಾಯಿ, ಪತ್ನಿ ಅಥವಾ ಮಕ್ಕಳು ಊಟವನ್ನು ಬಡಿಸಬೇಕು. ತಡರಾತ್ರಿ ಊಟ ಮಾಡಬಾರದು ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಮಧ್ಯರಾತ್ರಿಯ ಊಟವನ್ನು ರಾಕ್ಷಸ ಭೋಜನ ಎಂದು ಹೇಳಲಾಗುತ್ತದೆ. ಊಟ ಮಾಡುವಾಗ ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ಗಬಗಬನೆ ತಿನ್ನುವುದು, ಅತಿ ನಿಧಾನವಾಗಿ ಊಟ ಮಾಡುವುದು; ಇವರೆಡೂ ಸರಿಯಲ್ಲ. ಊಟಕ್ಕೆ ಕುಳಿತವರು ಬಡಿಸಿದ ಎಲ್ಲವನ್ನೂ ತಿನ್ನಬೇಕು. ಏಕೆಂದರೆ ಅನ್ನ ಎಂದರೆ ಪರಬ್ರಹ್ಮ ಸ್ವರೂಪ,

ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ನಾವು ಅನ್ನಕ್ಕಾಗಿ ಕಾಯಬೇಕೇ ಹೊರತು ಅನ್ನ ನಮಗಾಗಿ ಕಾಯಬಾರದು. ಬಡಿಸಿದ ಎಲೆಯನ್ನು ಎಂದಿಗೂ ಖಾಲಿಬಿಡಬೇಡಿ. ನೀವು ಹಾಗೆ ಮಾಡಿದರೆ ಭವಿಷ್ಯದಲ್ಲಿ ಬಡತನವನ್ನು ಎದುರಿಸುವ ಅವಕಾಶ ಇರುತ್ತದೆ.

ನಮ್ಮ ಊಟ ಹೀಗಿರಲಿ:

*ತಟ್ಟೆಯಲ್ಲಿ ಅನ್ನ ಬಡಿಸಿದ ತಕ್ಷಣ ಊಟ ಪ್ರಾರಂಭಿಸಿ.
*ಯಾವುದೇ ಕಾರಣಕ್ಕೂ ಊಟವನ್ನು ಕಾಯಿಸಬೇಡಿ
*ಊಟಕ್ಕಾಗಿ ನೀವು ಕಾಯ್ದರೆ ಪರವಾಗಿಲ್ಲ.
*ಊಟಕ್ಕೆ ಕುಳಿತಾಗ ಎಂದಿಗೂ ಎಡಗೈಯನ್ನು ನೆಲಕ್ಕೆ ಊರ ಬೇಡಿರಿ.
*ನಿಮಗೆ ಎಷ್ಟು ಅವಶ್ಯಕವೋ ಅಷ್ಟನ್ನೇ ಹಾಕಿಸಿಕೊಳ್ಳಿ.
*ತಟ್ಟೆಯಲ್ಲಿ ಎಂದಿಗೂ ಅನ್ನವನ್ನು ಚೆಲ್ಲಬೇಡಿ.
*ಊಟ ಮಾಡುವಾಗ ಊಟದ ಕೈಯನ್ನು ಜಾಡಿಸಬೇಡಿರಿ.
*ಊಟ ಮಾಡುವಾಗ ಮಾತನಾಡಬೇಡಿ. ಮಾತನಾಡುವ ಅವಶ್ಯಕತೆಯಿದ್ದರೆ ಅವಶ್ಯಕತೆ ಇದ್ದಷ್ಟೇ ಮಾತನಾಡಿ.
*ನಡುನಡುವೆ ನೀರು ಕುಡಿಯಿರಿ. ಇದು ಆಹಾರದ ಪಚನ ಕ್ರಿಯೆಗೆ ಸಹಕಾರಿ.
*ಅಡುಗೆಯನ್ನು ಮನೆಯವರು – ಅಮ್ಮ-ಅಕ್ಕ-ಹೆಂಡತಿ ಬಹಳಷ್ಟು ಇಷ್ಟಪಟ್ಟು ಶ್ರಮ ವಹಿಸಿ ತಯಾರಿಸಿರುತ್ತಾರೆ ಎಂಬುದನ್ನು ಎಂದಿಗೂ ಮರೆಯಬೇಡಿ. ಅವರಿಗೆ ಅವಮಾನವಾಗುವಂತೆ ಅಡುಗೆಯ ಬಗ್ಗೆ ವಿಮರ್ಶೆ ಮಾಡಬೇಡಿ.
*ಉಣ್ಣುವಾಗ ತಟ್ಟೆಯ ಕೆಳಗೆ ಅನ್ನವನ್ನು ಚೆಲ್ಲಿಕೊಂಡು ಉಣ್ಣಬೇಡಿ.
*ಆಕಸ್ಮಾತಾಗಿ ತುತ್ತು ಕೆಳಕ್ಕೆ ಬಿದ್ದರೆ ಯಾವುದೇ ಸಂಕೋಚವಿಲ್ಲದೆ ಎತ್ತಿಕೊಂಡು, ಕಣ್ಣಿಗೆ ಒತ್ತಿಕೊಂಡು ಬಾಯಿಗೆ ಹಾಕಿಕೊಳ್ಳಿ.
*ತುತ್ತಿನ ಬಗ್ಗೆ ಅಲಕ್ಷ್ಯ, ತಾತ್ಸಾರ ಮಾಡಿದರೆ ಮುಂದೊಂದು ದಿನ ಒಂದೊಂದು ತುತ್ತಿಗೂ ಪರದಾಡಬೇಕಾದೀತು.
*ಉಣ್ಣುವಾಗ ನಿಮ್ಮ ಎಂಜಿಲನ್ನು ಪಕ್ಕದ ತಟ್ಟೆಗೆ ಹಾಕುವುದು ಅಥವಾ ಅವರಿಂದ ನೀವು ತೆಗೆದುಕೊಳ್ಳುವುದನ್ನು ಮಾಡಬೇಡಿ.
*ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ.

(Social Media)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

8 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

14 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago