Advertisement
Opinion

ಅನ್ನ ಬ್ರಹ್ಮ ಸ್ವರೂಪಿ | ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ…!

Share

ಒಬ್ಬರೇ ಊಟ ಮಾಡಬಾರದು. ತಾಯಿ, ಪತ್ನಿ ಅಥವಾ ಮಕ್ಕಳು ಊಟವನ್ನು ಬಡಿಸಬೇಕು. ತಡರಾತ್ರಿ ಊಟ ಮಾಡಬಾರದು ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಮಧ್ಯರಾತ್ರಿಯ ಊಟವನ್ನು ರಾಕ್ಷಸ ಭೋಜನ ಎಂದು ಹೇಳಲಾಗುತ್ತದೆ. ಊಟ ಮಾಡುವಾಗ ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ಗಬಗಬನೆ ತಿನ್ನುವುದು, ಅತಿ ನಿಧಾನವಾಗಿ ಊಟ ಮಾಡುವುದು; ಇವರೆಡೂ ಸರಿಯಲ್ಲ. ಊಟಕ್ಕೆ ಕುಳಿತವರು ಬಡಿಸಿದ ಎಲ್ಲವನ್ನೂ ತಿನ್ನಬೇಕು. ಏಕೆಂದರೆ ಅನ್ನ ಎಂದರೆ ಪರಬ್ರಹ್ಮ ಸ್ವರೂಪ,

ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ನಾವು ಅನ್ನಕ್ಕಾಗಿ ಕಾಯಬೇಕೇ ಹೊರತು ಅನ್ನ ನಮಗಾಗಿ ಕಾಯಬಾರದು. ಬಡಿಸಿದ ಎಲೆಯನ್ನು ಎಂದಿಗೂ ಖಾಲಿಬಿಡಬೇಡಿ. ನೀವು ಹಾಗೆ ಮಾಡಿದರೆ ಭವಿಷ್ಯದಲ್ಲಿ ಬಡತನವನ್ನು ಎದುರಿಸುವ ಅವಕಾಶ ಇರುತ್ತದೆ.

ನಮ್ಮ ಊಟ ಹೀಗಿರಲಿ:

*ತಟ್ಟೆಯಲ್ಲಿ ಅನ್ನ ಬಡಿಸಿದ ತಕ್ಷಣ ಊಟ ಪ್ರಾರಂಭಿಸಿ.
*ಯಾವುದೇ ಕಾರಣಕ್ಕೂ ಊಟವನ್ನು ಕಾಯಿಸಬೇಡಿ
*ಊಟಕ್ಕಾಗಿ ನೀವು ಕಾಯ್ದರೆ ಪರವಾಗಿಲ್ಲ.
*ಊಟಕ್ಕೆ ಕುಳಿತಾಗ ಎಂದಿಗೂ ಎಡಗೈಯನ್ನು ನೆಲಕ್ಕೆ ಊರ ಬೇಡಿರಿ.
*ನಿಮಗೆ ಎಷ್ಟು ಅವಶ್ಯಕವೋ ಅಷ್ಟನ್ನೇ ಹಾಕಿಸಿಕೊಳ್ಳಿ.
*ತಟ್ಟೆಯಲ್ಲಿ ಎಂದಿಗೂ ಅನ್ನವನ್ನು ಚೆಲ್ಲಬೇಡಿ.
*ಊಟ ಮಾಡುವಾಗ ಊಟದ ಕೈಯನ್ನು ಜಾಡಿಸಬೇಡಿರಿ.
*ಊಟ ಮಾಡುವಾಗ ಮಾತನಾಡಬೇಡಿ. ಮಾತನಾಡುವ ಅವಶ್ಯಕತೆಯಿದ್ದರೆ ಅವಶ್ಯಕತೆ ಇದ್ದಷ್ಟೇ ಮಾತನಾಡಿ.
*ನಡುನಡುವೆ ನೀರು ಕುಡಿಯಿರಿ. ಇದು ಆಹಾರದ ಪಚನ ಕ್ರಿಯೆಗೆ ಸಹಕಾರಿ.
*ಅಡುಗೆಯನ್ನು ಮನೆಯವರು – ಅಮ್ಮ-ಅಕ್ಕ-ಹೆಂಡತಿ ಬಹಳಷ್ಟು ಇಷ್ಟಪಟ್ಟು ಶ್ರಮ ವಹಿಸಿ ತಯಾರಿಸಿರುತ್ತಾರೆ ಎಂಬುದನ್ನು ಎಂದಿಗೂ ಮರೆಯಬೇಡಿ. ಅವರಿಗೆ ಅವಮಾನವಾಗುವಂತೆ ಅಡುಗೆಯ ಬಗ್ಗೆ ವಿಮರ್ಶೆ ಮಾಡಬೇಡಿ.
*ಉಣ್ಣುವಾಗ ತಟ್ಟೆಯ ಕೆಳಗೆ ಅನ್ನವನ್ನು ಚೆಲ್ಲಿಕೊಂಡು ಉಣ್ಣಬೇಡಿ.
*ಆಕಸ್ಮಾತಾಗಿ ತುತ್ತು ಕೆಳಕ್ಕೆ ಬಿದ್ದರೆ ಯಾವುದೇ ಸಂಕೋಚವಿಲ್ಲದೆ ಎತ್ತಿಕೊಂಡು, ಕಣ್ಣಿಗೆ ಒತ್ತಿಕೊಂಡು ಬಾಯಿಗೆ ಹಾಕಿಕೊಳ್ಳಿ.
*ತುತ್ತಿನ ಬಗ್ಗೆ ಅಲಕ್ಷ್ಯ, ತಾತ್ಸಾರ ಮಾಡಿದರೆ ಮುಂದೊಂದು ದಿನ ಒಂದೊಂದು ತುತ್ತಿಗೂ ಪರದಾಡಬೇಕಾದೀತು.
*ಉಣ್ಣುವಾಗ ನಿಮ್ಮ ಎಂಜಿಲನ್ನು ಪಕ್ಕದ ತಟ್ಟೆಗೆ ಹಾಕುವುದು ಅಥವಾ ಅವರಿಂದ ನೀವು ತೆಗೆದುಕೊಳ್ಳುವುದನ್ನು ಮಾಡಬೇಡಿ.
*ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ.

(Social Media)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

13 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 days ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

2 days ago