Advertisement
Opinion

ಅನ್ನ ಬ್ರಹ್ಮ ಸ್ವರೂಪಿ | ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ…!

Share

ಒಬ್ಬರೇ ಊಟ ಮಾಡಬಾರದು. ತಾಯಿ, ಪತ್ನಿ ಅಥವಾ ಮಕ್ಕಳು ಊಟವನ್ನು ಬಡಿಸಬೇಕು. ತಡರಾತ್ರಿ ಊಟ ಮಾಡಬಾರದು ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಮಧ್ಯರಾತ್ರಿಯ ಊಟವನ್ನು ರಾಕ್ಷಸ ಭೋಜನ ಎಂದು ಹೇಳಲಾಗುತ್ತದೆ. ಊಟ ಮಾಡುವಾಗ ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ಗಬಗಬನೆ ತಿನ್ನುವುದು, ಅತಿ ನಿಧಾನವಾಗಿ ಊಟ ಮಾಡುವುದು; ಇವರೆಡೂ ಸರಿಯಲ್ಲ. ಊಟಕ್ಕೆ ಕುಳಿತವರು ಬಡಿಸಿದ ಎಲ್ಲವನ್ನೂ ತಿನ್ನಬೇಕು. ಏಕೆಂದರೆ ಅನ್ನ ಎಂದರೆ ಪರಬ್ರಹ್ಮ ಸ್ವರೂಪ,

ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ನಾವು ಅನ್ನಕ್ಕಾಗಿ ಕಾಯಬೇಕೇ ಹೊರತು ಅನ್ನ ನಮಗಾಗಿ ಕಾಯಬಾರದು. ಬಡಿಸಿದ ಎಲೆಯನ್ನು ಎಂದಿಗೂ ಖಾಲಿಬಿಡಬೇಡಿ. ನೀವು ಹಾಗೆ ಮಾಡಿದರೆ ಭವಿಷ್ಯದಲ್ಲಿ ಬಡತನವನ್ನು ಎದುರಿಸುವ ಅವಕಾಶ ಇರುತ್ತದೆ.

ನಮ್ಮ ಊಟ ಹೀಗಿರಲಿ:

*ತಟ್ಟೆಯಲ್ಲಿ ಅನ್ನ ಬಡಿಸಿದ ತಕ್ಷಣ ಊಟ ಪ್ರಾರಂಭಿಸಿ.
*ಯಾವುದೇ ಕಾರಣಕ್ಕೂ ಊಟವನ್ನು ಕಾಯಿಸಬೇಡಿ
*ಊಟಕ್ಕಾಗಿ ನೀವು ಕಾಯ್ದರೆ ಪರವಾಗಿಲ್ಲ.
*ಊಟಕ್ಕೆ ಕುಳಿತಾಗ ಎಂದಿಗೂ ಎಡಗೈಯನ್ನು ನೆಲಕ್ಕೆ ಊರ ಬೇಡಿರಿ.
*ನಿಮಗೆ ಎಷ್ಟು ಅವಶ್ಯಕವೋ ಅಷ್ಟನ್ನೇ ಹಾಕಿಸಿಕೊಳ್ಳಿ.
*ತಟ್ಟೆಯಲ್ಲಿ ಎಂದಿಗೂ ಅನ್ನವನ್ನು ಚೆಲ್ಲಬೇಡಿ.
*ಊಟ ಮಾಡುವಾಗ ಊಟದ ಕೈಯನ್ನು ಜಾಡಿಸಬೇಡಿರಿ.
*ಊಟ ಮಾಡುವಾಗ ಮಾತನಾಡಬೇಡಿ. ಮಾತನಾಡುವ ಅವಶ್ಯಕತೆಯಿದ್ದರೆ ಅವಶ್ಯಕತೆ ಇದ್ದಷ್ಟೇ ಮಾತನಾಡಿ.
*ನಡುನಡುವೆ ನೀರು ಕುಡಿಯಿರಿ. ಇದು ಆಹಾರದ ಪಚನ ಕ್ರಿಯೆಗೆ ಸಹಕಾರಿ.
*ಅಡುಗೆಯನ್ನು ಮನೆಯವರು – ಅಮ್ಮ-ಅಕ್ಕ-ಹೆಂಡತಿ ಬಹಳಷ್ಟು ಇಷ್ಟಪಟ್ಟು ಶ್ರಮ ವಹಿಸಿ ತಯಾರಿಸಿರುತ್ತಾರೆ ಎಂಬುದನ್ನು ಎಂದಿಗೂ ಮರೆಯಬೇಡಿ. ಅವರಿಗೆ ಅವಮಾನವಾಗುವಂತೆ ಅಡುಗೆಯ ಬಗ್ಗೆ ವಿಮರ್ಶೆ ಮಾಡಬೇಡಿ.
*ಉಣ್ಣುವಾಗ ತಟ್ಟೆಯ ಕೆಳಗೆ ಅನ್ನವನ್ನು ಚೆಲ್ಲಿಕೊಂಡು ಉಣ್ಣಬೇಡಿ.
*ಆಕಸ್ಮಾತಾಗಿ ತುತ್ತು ಕೆಳಕ್ಕೆ ಬಿದ್ದರೆ ಯಾವುದೇ ಸಂಕೋಚವಿಲ್ಲದೆ ಎತ್ತಿಕೊಂಡು, ಕಣ್ಣಿಗೆ ಒತ್ತಿಕೊಂಡು ಬಾಯಿಗೆ ಹಾಕಿಕೊಳ್ಳಿ.
*ತುತ್ತಿನ ಬಗ್ಗೆ ಅಲಕ್ಷ್ಯ, ತಾತ್ಸಾರ ಮಾಡಿದರೆ ಮುಂದೊಂದು ದಿನ ಒಂದೊಂದು ತುತ್ತಿಗೂ ಪರದಾಡಬೇಕಾದೀತು.
*ಉಣ್ಣುವಾಗ ನಿಮ್ಮ ಎಂಜಿಲನ್ನು ಪಕ್ಕದ ತಟ್ಟೆಗೆ ಹಾಕುವುದು ಅಥವಾ ಅವರಿಂದ ನೀವು ತೆಗೆದುಕೊಳ್ಳುವುದನ್ನು ಮಾಡಬೇಡಿ.
*ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ.

(Social Media)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

1 hour ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

11 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

12 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

12 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

18 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

20 hours ago