Advertisement
Opinion

ಅನ್ನ ಬ್ರಹ್ಮ ಸ್ವರೂಪಿ | ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ…!

Share

ಒಬ್ಬರೇ ಊಟ ಮಾಡಬಾರದು. ತಾಯಿ, ಪತ್ನಿ ಅಥವಾ ಮಕ್ಕಳು ಊಟವನ್ನು ಬಡಿಸಬೇಕು. ತಡರಾತ್ರಿ ಊಟ ಮಾಡಬಾರದು ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಮಧ್ಯರಾತ್ರಿಯ ಊಟವನ್ನು ರಾಕ್ಷಸ ಭೋಜನ ಎಂದು ಹೇಳಲಾಗುತ್ತದೆ. ಊಟ ಮಾಡುವಾಗ ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ಗಬಗಬನೆ ತಿನ್ನುವುದು, ಅತಿ ನಿಧಾನವಾಗಿ ಊಟ ಮಾಡುವುದು; ಇವರೆಡೂ ಸರಿಯಲ್ಲ. ಊಟಕ್ಕೆ ಕುಳಿತವರು ಬಡಿಸಿದ ಎಲ್ಲವನ್ನೂ ತಿನ್ನಬೇಕು. ಏಕೆಂದರೆ ಅನ್ನ ಎಂದರೆ ಪರಬ್ರಹ್ಮ ಸ್ವರೂಪ,

ಬೇಕಿರುವಷ್ಟನ್ನೇ ಹಾಕಿಸಿಕೊಳ್ಳಬೇಕು. ನಾವು ಅನ್ನಕ್ಕಾಗಿ ಕಾಯಬೇಕೇ ಹೊರತು ಅನ್ನ ನಮಗಾಗಿ ಕಾಯಬಾರದು. ಬಡಿಸಿದ ಎಲೆಯನ್ನು ಎಂದಿಗೂ ಖಾಲಿಬಿಡಬೇಡಿ. ನೀವು ಹಾಗೆ ಮಾಡಿದರೆ ಭವಿಷ್ಯದಲ್ಲಿ ಬಡತನವನ್ನು ಎದುರಿಸುವ ಅವಕಾಶ ಇರುತ್ತದೆ.

ನಮ್ಮ ಊಟ ಹೀಗಿರಲಿ:

*ತಟ್ಟೆಯಲ್ಲಿ ಅನ್ನ ಬಡಿಸಿದ ತಕ್ಷಣ ಊಟ ಪ್ರಾರಂಭಿಸಿ.
*ಯಾವುದೇ ಕಾರಣಕ್ಕೂ ಊಟವನ್ನು ಕಾಯಿಸಬೇಡಿ
*ಊಟಕ್ಕಾಗಿ ನೀವು ಕಾಯ್ದರೆ ಪರವಾಗಿಲ್ಲ.
*ಊಟಕ್ಕೆ ಕುಳಿತಾಗ ಎಂದಿಗೂ ಎಡಗೈಯನ್ನು ನೆಲಕ್ಕೆ ಊರ ಬೇಡಿರಿ.
*ನಿಮಗೆ ಎಷ್ಟು ಅವಶ್ಯಕವೋ ಅಷ್ಟನ್ನೇ ಹಾಕಿಸಿಕೊಳ್ಳಿ.
*ತಟ್ಟೆಯಲ್ಲಿ ಎಂದಿಗೂ ಅನ್ನವನ್ನು ಚೆಲ್ಲಬೇಡಿ.
*ಊಟ ಮಾಡುವಾಗ ಊಟದ ಕೈಯನ್ನು ಜಾಡಿಸಬೇಡಿರಿ.
*ಊಟ ಮಾಡುವಾಗ ಮಾತನಾಡಬೇಡಿ. ಮಾತನಾಡುವ ಅವಶ್ಯಕತೆಯಿದ್ದರೆ ಅವಶ್ಯಕತೆ ಇದ್ದಷ್ಟೇ ಮಾತನಾಡಿ.
*ನಡುನಡುವೆ ನೀರು ಕುಡಿಯಿರಿ. ಇದು ಆಹಾರದ ಪಚನ ಕ್ರಿಯೆಗೆ ಸಹಕಾರಿ.
*ಅಡುಗೆಯನ್ನು ಮನೆಯವರು – ಅಮ್ಮ-ಅಕ್ಕ-ಹೆಂಡತಿ ಬಹಳಷ್ಟು ಇಷ್ಟಪಟ್ಟು ಶ್ರಮ ವಹಿಸಿ ತಯಾರಿಸಿರುತ್ತಾರೆ ಎಂಬುದನ್ನು ಎಂದಿಗೂ ಮರೆಯಬೇಡಿ. ಅವರಿಗೆ ಅವಮಾನವಾಗುವಂತೆ ಅಡುಗೆಯ ಬಗ್ಗೆ ವಿಮರ್ಶೆ ಮಾಡಬೇಡಿ.
*ಉಣ್ಣುವಾಗ ತಟ್ಟೆಯ ಕೆಳಗೆ ಅನ್ನವನ್ನು ಚೆಲ್ಲಿಕೊಂಡು ಉಣ್ಣಬೇಡಿ.
*ಆಕಸ್ಮಾತಾಗಿ ತುತ್ತು ಕೆಳಕ್ಕೆ ಬಿದ್ದರೆ ಯಾವುದೇ ಸಂಕೋಚವಿಲ್ಲದೆ ಎತ್ತಿಕೊಂಡು, ಕಣ್ಣಿಗೆ ಒತ್ತಿಕೊಂಡು ಬಾಯಿಗೆ ಹಾಕಿಕೊಳ್ಳಿ.
*ತುತ್ತಿನ ಬಗ್ಗೆ ಅಲಕ್ಷ್ಯ, ತಾತ್ಸಾರ ಮಾಡಿದರೆ ಮುಂದೊಂದು ದಿನ ಒಂದೊಂದು ತುತ್ತಿಗೂ ಪರದಾಡಬೇಕಾದೀತು.
*ಉಣ್ಣುವಾಗ ನಿಮ್ಮ ಎಂಜಿಲನ್ನು ಪಕ್ಕದ ತಟ್ಟೆಗೆ ಹಾಕುವುದು ಅಥವಾ ಅವರಿಂದ ನೀವು ತೆಗೆದುಕೊಳ್ಳುವುದನ್ನು ಮಾಡಬೇಡಿ.
*ಅನ್ನ ಬ್ರಹ್ಮ ಸ್ವರೂಪಿ. ಯಾವ ಕಾರಣಕ್ಕೂ ಭಗವಂತನಿಗೆ ಅವಮಾನಿಸಬೇಡಿ.

(Social Media)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

1 hour ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

10 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

10 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago