Advertisement
MIRROR FOCUS

ಅನ್ನಭಾಗ್ಯ ಯೋಜನೆಯಡಿ 8,433 ಕೋಟಿ ರೂಪಾಯಿ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ

Share

ಅನ್ನಭಾಗ್ಯ ಯೋಜನೆಯಡಿ ಕಳೆದ  ವರ್ಷದ ಜುಲೈ ನಿಂದ ಈ ವರ್ಷದ ಜುಲೈ ಅಂತ್ಯದವರೆಗೂ 8 ಸಾವಿರದ 433.11 ಕೋಟಿ ರೂಪಾಯಿ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ ಎಂದು  ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ  ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ  ತಿಳಿಸಿದ್ದಾರೆ.

Advertisement
Advertisement

ಪ್ರತಿ ಕೆಜಿ  ಅಕ್ಕಿಗೆ  34 ರೂಪಾಯಿಯಂತೆ  5 ಕೆಜಿ ಅಕ್ಕಿಗೆ  ಪ್ರತಿ ಸದಸ್ಯರಿಗೆ  170 ರೂಪಾಯಿಯಂತೆ ಕುಟುಂಬದ ಮುಖ್ಯಸ್ಥರ  ಬ್ಯಾಂಕ್ ಖಾತೆ ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ನೇರ  ನಗದು ಬದಲಾವಣೆ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ  ಪಡಿತರ ಪಡೆಯದೇ ಇರುವುದು, ಒಂದು ವರ್ಷದಿಂದ ನೇರ ನಗದು ಸ್ವೀಕರಿಸದೇ ಇರುವುದು, ಆದಾಯ ತೆರಿಗೆ ಪಾವತಿ ಮಾಡುತ್ತಿರುವ  ವಾರ್ಷಿಕ ವರಮಾನ ಹೆಚ್ಚುತ್ತಿರುವುದು  ಸೇರಿದಂತೆ  ವಿವಿಧ ಕಾರಣಗಳಿಂದ  ಸುಮಾರು  20 ಲಕ್ಷಕ್ಕೂ ಹೆಚ್ಚು  ಅನರ್ಹ ಪಡಿತರ ಕಾರ್ಡ್ ಗಳಿದ್ದು ಅವುಗಳಲ್ಲಿ  ಕನಿಷ್ಠ 10ರಿಂದ  12 ಲಕ್ಷ ಅನರ್ಹ  ಪಡಿತರ ಚೀಟಿಗಳು  ಪತ್ತೆಯಾಗಬಹುದು. ಅದಕ್ಕೆ  ಅನುಗುಣವಾಗಿ  ಅರ್ಜಿ ಆಹ್ವಾನಿಸಿ  ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಆಹಾರ ವ್ಯರ್ಥ  ತಡೆಯುವ ಉದ್ದೇಶದಿಂದ  ಅಂತಾರಾಷ್ಟ್ರೀಯ ಮಟ್ಟದ  ಸಮ್ಮೇಳನವನ್ನು ಆಯೋಜಿಸಲು  ಸರ್ಕಾರ ಉದ್ದೇಶಿಸಿದೆ. ಈ ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ಆಹಾರ ತಜ್ಞರು  ಹಾಗೂ  ಆಹಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎನ್ ಜಿಒಗಳನ್ನು ಆಹ್ವಾನಿಸಲಾಗುವುದು.  ‘ಎಲ್ಲರಿಗೂ ಆಹಾರ  ಹಾಗೂ ಉತ್ತಮ ಜೀವನ ಮತ್ತು  ಉತ್ತಮ ಭವಿಷ್ಯಕ್ಕಾಗಿ  ಆಹಾರದ ಹಕ್ಕು’ ಘೋಷ ವಾಕ್ಯದಲ್ಲಿ  ಸಮ್ಮೇಳನ ಆಯೋಜಿಸಲು  ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

45 minutes ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

59 minutes ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

11 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

11 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

11 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

11 hours ago