Advertisement
MIRROR FOCUS

ಅನ್ನಭಾಗ್ಯ ಯೋಜನೆಯಡಿ 8,433 ಕೋಟಿ ರೂಪಾಯಿ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ

Share

ಅನ್ನಭಾಗ್ಯ ಯೋಜನೆಯಡಿ ಕಳೆದ  ವರ್ಷದ ಜುಲೈ ನಿಂದ ಈ ವರ್ಷದ ಜುಲೈ ಅಂತ್ಯದವರೆಗೂ 8 ಸಾವಿರದ 433.11 ಕೋಟಿ ರೂಪಾಯಿ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ ಎಂದು  ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ  ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ  ತಿಳಿಸಿದ್ದಾರೆ.

ಪ್ರತಿ ಕೆಜಿ  ಅಕ್ಕಿಗೆ  34 ರೂಪಾಯಿಯಂತೆ  5 ಕೆಜಿ ಅಕ್ಕಿಗೆ  ಪ್ರತಿ ಸದಸ್ಯರಿಗೆ  170 ರೂಪಾಯಿಯಂತೆ ಕುಟುಂಬದ ಮುಖ್ಯಸ್ಥರ  ಬ್ಯಾಂಕ್ ಖಾತೆ ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ನೇರ  ನಗದು ಬದಲಾವಣೆ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ  ಪಡಿತರ ಪಡೆಯದೇ ಇರುವುದು, ಒಂದು ವರ್ಷದಿಂದ ನೇರ ನಗದು ಸ್ವೀಕರಿಸದೇ ಇರುವುದು, ಆದಾಯ ತೆರಿಗೆ ಪಾವತಿ ಮಾಡುತ್ತಿರುವ  ವಾರ್ಷಿಕ ವರಮಾನ ಹೆಚ್ಚುತ್ತಿರುವುದು  ಸೇರಿದಂತೆ  ವಿವಿಧ ಕಾರಣಗಳಿಂದ  ಸುಮಾರು  20 ಲಕ್ಷಕ್ಕೂ ಹೆಚ್ಚು  ಅನರ್ಹ ಪಡಿತರ ಕಾರ್ಡ್ ಗಳಿದ್ದು ಅವುಗಳಲ್ಲಿ  ಕನಿಷ್ಠ 10ರಿಂದ  12 ಲಕ್ಷ ಅನರ್ಹ  ಪಡಿತರ ಚೀಟಿಗಳು  ಪತ್ತೆಯಾಗಬಹುದು. ಅದಕ್ಕೆ  ಅನುಗುಣವಾಗಿ  ಅರ್ಜಿ ಆಹ್ವಾನಿಸಿ  ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಆಹಾರ ವ್ಯರ್ಥ  ತಡೆಯುವ ಉದ್ದೇಶದಿಂದ  ಅಂತಾರಾಷ್ಟ್ರೀಯ ಮಟ್ಟದ  ಸಮ್ಮೇಳನವನ್ನು ಆಯೋಜಿಸಲು  ಸರ್ಕಾರ ಉದ್ದೇಶಿಸಿದೆ. ಈ ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ಆಹಾರ ತಜ್ಞರು  ಹಾಗೂ  ಆಹಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎನ್ ಜಿಒಗಳನ್ನು ಆಹ್ವಾನಿಸಲಾಗುವುದು.  ‘ಎಲ್ಲರಿಗೂ ಆಹಾರ  ಹಾಗೂ ಉತ್ತಮ ಜೀವನ ಮತ್ತು  ಉತ್ತಮ ಭವಿಷ್ಯಕ್ಕಾಗಿ  ಆಹಾರದ ಹಕ್ಕು’ ಘೋಷ ವಾಕ್ಯದಲ್ಲಿ  ಸಮ್ಮೇಳನ ಆಯೋಜಿಸಲು  ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

5 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

6 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

14 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

14 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

15 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

15 hours ago