MIRROR FOCUS

ಅನ್ನಭಾಗ್ಯ ಯೋಜನೆಯಡಿ 8,433 ಕೋಟಿ ರೂಪಾಯಿ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅನ್ನಭಾಗ್ಯ ಯೋಜನೆಯಡಿ ಕಳೆದ  ವರ್ಷದ ಜುಲೈ ನಿಂದ ಈ ವರ್ಷದ ಜುಲೈ ಅಂತ್ಯದವರೆಗೂ 8 ಸಾವಿರದ 433.11 ಕೋಟಿ ರೂಪಾಯಿ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ ಎಂದು  ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ  ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ  ತಿಳಿಸಿದ್ದಾರೆ.

Advertisement
Advertisement

ಪ್ರತಿ ಕೆಜಿ  ಅಕ್ಕಿಗೆ  34 ರೂಪಾಯಿಯಂತೆ  5 ಕೆಜಿ ಅಕ್ಕಿಗೆ  ಪ್ರತಿ ಸದಸ್ಯರಿಗೆ  170 ರೂಪಾಯಿಯಂತೆ ಕುಟುಂಬದ ಮುಖ್ಯಸ್ಥರ  ಬ್ಯಾಂಕ್ ಖಾತೆ ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ನೇರ  ನಗದು ಬದಲಾವಣೆ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ  ಪಡಿತರ ಪಡೆಯದೇ ಇರುವುದು, ಒಂದು ವರ್ಷದಿಂದ ನೇರ ನಗದು ಸ್ವೀಕರಿಸದೇ ಇರುವುದು, ಆದಾಯ ತೆರಿಗೆ ಪಾವತಿ ಮಾಡುತ್ತಿರುವ  ವಾರ್ಷಿಕ ವರಮಾನ ಹೆಚ್ಚುತ್ತಿರುವುದು  ಸೇರಿದಂತೆ  ವಿವಿಧ ಕಾರಣಗಳಿಂದ  ಸುಮಾರು  20 ಲಕ್ಷಕ್ಕೂ ಹೆಚ್ಚು  ಅನರ್ಹ ಪಡಿತರ ಕಾರ್ಡ್ ಗಳಿದ್ದು ಅವುಗಳಲ್ಲಿ  ಕನಿಷ್ಠ 10ರಿಂದ  12 ಲಕ್ಷ ಅನರ್ಹ  ಪಡಿತರ ಚೀಟಿಗಳು  ಪತ್ತೆಯಾಗಬಹುದು. ಅದಕ್ಕೆ  ಅನುಗುಣವಾಗಿ  ಅರ್ಜಿ ಆಹ್ವಾನಿಸಿ  ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಆಹಾರ ವ್ಯರ್ಥ  ತಡೆಯುವ ಉದ್ದೇಶದಿಂದ  ಅಂತಾರಾಷ್ಟ್ರೀಯ ಮಟ್ಟದ  ಸಮ್ಮೇಳನವನ್ನು ಆಯೋಜಿಸಲು  ಸರ್ಕಾರ ಉದ್ದೇಶಿಸಿದೆ. ಈ ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ಆಹಾರ ತಜ್ಞರು  ಹಾಗೂ  ಆಹಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎನ್ ಜಿಒಗಳನ್ನು ಆಹ್ವಾನಿಸಲಾಗುವುದು.  ‘ಎಲ್ಲರಿಗೂ ಆಹಾರ  ಹಾಗೂ ಉತ್ತಮ ಜೀವನ ಮತ್ತು  ಉತ್ತಮ ಭವಿಷ್ಯಕ್ಕಾಗಿ  ಆಹಾರದ ಹಕ್ಕು’ ಘೋಷ ವಾಕ್ಯದಲ್ಲಿ  ಸಮ್ಮೇಳನ ಆಯೋಜಿಸಲು  ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

6 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

6 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

6 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

7 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

8 hours ago

ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು.  ಊರಿನ ಆಸು ಪಾಸಿನಲ್ಲಿರುವ…

9 hours ago