Advertisement
MIRROR FOCUS

ಅನ್ನಭಾಗ್ಯ ಯೋಜನೆಯಡಿ 8,433 ಕೋಟಿ ರೂಪಾಯಿ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ

Share

ಅನ್ನಭಾಗ್ಯ ಯೋಜನೆಯಡಿ ಕಳೆದ  ವರ್ಷದ ಜುಲೈ ನಿಂದ ಈ ವರ್ಷದ ಜುಲೈ ಅಂತ್ಯದವರೆಗೂ 8 ಸಾವಿರದ 433.11 ಕೋಟಿ ರೂಪಾಯಿ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ ಎಂದು  ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ  ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ  ತಿಳಿಸಿದ್ದಾರೆ.

ಪ್ರತಿ ಕೆಜಿ  ಅಕ್ಕಿಗೆ  34 ರೂಪಾಯಿಯಂತೆ  5 ಕೆಜಿ ಅಕ್ಕಿಗೆ  ಪ್ರತಿ ಸದಸ್ಯರಿಗೆ  170 ರೂಪಾಯಿಯಂತೆ ಕುಟುಂಬದ ಮುಖ್ಯಸ್ಥರ  ಬ್ಯಾಂಕ್ ಖಾತೆ ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ ನೇರ  ನಗದು ಬದಲಾವಣೆ ಮುಂದುವರೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಳೆದ ಆರು ತಿಂಗಳಿನಿಂದ  ಪಡಿತರ ಪಡೆಯದೇ ಇರುವುದು, ಒಂದು ವರ್ಷದಿಂದ ನೇರ ನಗದು ಸ್ವೀಕರಿಸದೇ ಇರುವುದು, ಆದಾಯ ತೆರಿಗೆ ಪಾವತಿ ಮಾಡುತ್ತಿರುವ  ವಾರ್ಷಿಕ ವರಮಾನ ಹೆಚ್ಚುತ್ತಿರುವುದು  ಸೇರಿದಂತೆ  ವಿವಿಧ ಕಾರಣಗಳಿಂದ  ಸುಮಾರು  20 ಲಕ್ಷಕ್ಕೂ ಹೆಚ್ಚು  ಅನರ್ಹ ಪಡಿತರ ಕಾರ್ಡ್ ಗಳಿದ್ದು ಅವುಗಳಲ್ಲಿ  ಕನಿಷ್ಠ 10ರಿಂದ  12 ಲಕ್ಷ ಅನರ್ಹ  ಪಡಿತರ ಚೀಟಿಗಳು  ಪತ್ತೆಯಾಗಬಹುದು. ಅದಕ್ಕೆ  ಅನುಗುಣವಾಗಿ  ಅರ್ಜಿ ಆಹ್ವಾನಿಸಿ  ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಆಹಾರ ವ್ಯರ್ಥ  ತಡೆಯುವ ಉದ್ದೇಶದಿಂದ  ಅಂತಾರಾಷ್ಟ್ರೀಯ ಮಟ್ಟದ  ಸಮ್ಮೇಳನವನ್ನು ಆಯೋಜಿಸಲು  ಸರ್ಕಾರ ಉದ್ದೇಶಿಸಿದೆ. ಈ ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ಆಹಾರ ತಜ್ಞರು  ಹಾಗೂ  ಆಹಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎನ್ ಜಿಒಗಳನ್ನು ಆಹ್ವಾನಿಸಲಾಗುವುದು.  ‘ಎಲ್ಲರಿಗೂ ಆಹಾರ  ಹಾಗೂ ಉತ್ತಮ ಜೀವನ ಮತ್ತು  ಉತ್ತಮ ಭವಿಷ್ಯಕ್ಕಾಗಿ  ಆಹಾರದ ಹಕ್ಕು’ ಘೋಷ ವಾಕ್ಯದಲ್ಲಿ  ಸಮ್ಮೇಳನ ಆಯೋಜಿಸಲು  ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

7 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

8 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

1 day ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

1 day ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

1 day ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

2 days ago