Advertisement
ಸುದ್ದಿಗಳು

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’

Share

ಗೋಕರ್ಣದ ಅಶೋಕೆಯಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, “ಅನ್ನವನ್ನು ದೇವರೆಂದು ಕಾಣುವ ಸಂಸ್ಕೃತಿ ಸನಾತನ ಭಾರತದ ಪರಂಪರೆಯಾಗಿದ್ದು, ಆಹಾರವು ಕೇವಲ ದೇಹದ ಪೋಷಣೆಗೆ ಮಾತ್ರವಲ್ಲ, ಉತ್ತಮ ಜೀವನ ಹಾಗೂ ಆಧ್ಯಾತ್ಮಿಕ ಪ್ರಗತಿಗೂ ಕಾರಣವಾಗುತ್ತದೆ” ಎಂದು ಹೇಳಿದರು.

ಗೋಕರ್ಣದ ಅಶೋಕೆಯ ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯವು ಗುರುಗಳಿಗೆ ವ್ರತವಾದರೆ, ಶಿಷ್ಯಭಕ್ತರಿಗೆ ಅದು ಹಬ್ಬವಾಗಿದೆ. ಈ ಹಿನ್ನೆಲೆಯಲ್ಲಿ ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನವನ್ನು ಸಮಾಜಕ್ಕೆ ಪರಿಚಯಿಸುವ ಉದ್ದೇಶದಿಂದ ಈ ವರ್ಷದ ಚಾತುರ್ಮಾಸ್ಯವನ್ನು ‘ಅನ್ನಬ್ರಹ್ಮ ಚಾತುರ್ಮಾಸ್ಯ’ವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಅನ್ನ ವ್ಯರ್ಥ ಮಾಡುವ ಪ್ರವೃತ್ತಿಗೆ ಎಚ್ಚರಿಕೆ : ಇಂದು ಸಮಾಜದಲ್ಲಿ ಆರ್ಥಿಕ ಸಮೃದ್ಧಿ ಹೆಚ್ಚಾದಂತೆ ಅನ್ನವನ್ನು ವ್ಯರ್ಥ ಮಾಡುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಅನ್ನವನ್ನು ತಿರಸ್ಕರಿಸುವುದು, ಉಳಿದ ಆಹಾರವನ್ನು ವ್ಯರ್ಥ ಮಾಡುವುದು ಹಾಗೂ ಆಹಾರದ ಮಹತ್ವವನ್ನು ಮರೆತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಶ್ರೀಗಳು ವಿಷಾದ ವ್ಯಕ್ತಪಡಿಸಿದರು.

ಆಹಾರದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು, ಅನ್ನದ ಮೌಲ್ಯವನ್ನು ತಿಳಿಸುವುದು ಹಾಗೂ ಆಹಾರ ಸೇವನೆಯ ಸರಿಯಾದ ವಿಧಾನಗಳನ್ನು ಪರಿಚಯಿಸುವುದು ಈ ಚಾತುರ್ಮಾಸ್ಯದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಾಣಿ-ಮನುಷ್ಯರ ಆಹಾರ ಪದ್ಧತಿ ಕುರಿತು ಚಿಂತನೆ : ಪ್ರಾಣಿ-ಪಕ್ಷಿಗಳು ತಮ್ಮ ಜೀವನದ ಬಹುಭಾಗವನ್ನು ಆಹಾರ ಹುಡುಕುವುದರಲ್ಲಿ ಕಳೆಯುತ್ತವೆ. ಆದರೆ ಅವು ಪ್ರಕೃತಿಗೆ ಅನುಗುಣವಾದ ಆಹಾರವನ್ನಷ್ಟೇ ಸೇವಿಸುತ್ತವೆ. ಮನುಷ್ಯ ಮಾತ್ರ ಯೋಗ್ಯವಲ್ಲದ ಆಹಾರ ಪದ್ಧತಿಗಳನ್ನು ಅಳವಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಆಹಾರದ ಹಿನ್ನೆಲೆ, ತಯಾರಿಕೆ, ಸೇವನೆ ಮತ್ತು ಅದರ ಉದ್ದೇಶಕ್ಕೆ ಸಮಾಜದಲ್ಲಿ ಅಗತ್ಯ ಪ್ರಾಮುಖ್ಯತೆ ಸಿಗುತ್ತಿಲ್ಲ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಚಾತುರ್ಮಾಸ್ಯದ ಮೂಲಕ ನಡೆಯಲಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ಚಾತುರ್ಮಾಸ್ಯ :  ಗೋಕರ್ಣದ ಅಶೋಕೆಯ ಪರಿಸರದಲ್ಲಿ ಈ ವರ್ಷದ ‘ಅನ್ನಬ್ರಹ್ಮ ಚಾತುರ್ಮಾಸ್ಯ’ವು ಜುಲೈ 29ರಿಂದ ಸೆಪ್ಟೆಂಬರ್ 26, 2026ರವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಆಹಾರದ ಮಹತ್ವ, ಭೋಜನವೆಂಬ ತಪಸ್ಸು, ಆಹಾರ ಸೇವನೆಯ ಸರಿಯಾದ ಸಮಯ, ಜಲಪಾನದ ನಿಯಮಗಳು, ಉಪವಾಸದ ಮಹತ್ವ, ಭೋಜನದ ನಂತರ ಪಾಲಿಸಬೇಕಾದ ನಿಯಮಗಳು, ಭೋಜನ ಪಾತ್ರೆಗಳ ವೈಶಿಷ್ಟ್ಯ ಸೇರಿದಂತೆ ಅನೇಕ ವಿಷಯಗಳ ಕುರಿತು ವಿಶೇಷ ಪ್ರವಚನ ಮಾಲಿಕೆಗಳು ನಡೆಯಲಿವೆ.

ಜ್ಞಾನೋದ್ದೀಪನದ ಜೊತೆಗೆ ಪ್ರಾಚೀನ ಭಾರತೀಯ ಆಹಾರ ಪದ್ಧತಿಗಳ ಪರಿಚಯವೂ ಈ ಚಾತುರ್ಮಾಸ್ಯದ ವಿಶೇಷ ಆಕರ್ಷಣೆಯಾಗಲಿದೆ.

ಕಾರ್ಯಕ್ರಮದಲ್ಲಿ ಶ್ರೀಮಠದ ಆಡಳಿತಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್., ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Sri Raghaveshwara Bharathi Mahaswamiji launched the invitation for “Annabrahma Chaturmasya” at Gokarna Ashoke Math. The event, scheduled from July 29 to September 26, 2026, will focus on food awareness, preventing food wastage, traditional dietary wisdom, fasting practices, and the spiritual significance of food in Indian culture.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

40 minutes ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

5 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

15 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

16 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

16 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

22 hours ago