Advertisement
MIRROR FOCUS

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ | ಮೇಘಸ್ಫೋಟದಿಂದ ದಿಢೀರ್ ಪ್ರವಾಹ-ಭೂಕುಸಿತ

Share

ಜಮ್ಮು-ಕಾಶ್ಮೀರದಲ್ಲಿ  ಮತ್ತೆ ನಿನ್ನೆ  ಮೇಘಸ್ಫೋಟ ಸಂಭವಿಸಿದೆ.  ರಾಸಿ ಜಿಲ್ಲೆಯಲ್ಲಿ  ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮನೆಯೊಂದು ಕುಸಿತಗೊಂಡು ಐವರು ಮಕ್ಕಳು ಸೇರಿದಂತೆ  7 ಮಂದಿ ಮೃತಪಟ್ಟಿದ್ದಾರೆ.

ಅತಿವೃಷ್ಟಿ ಹಾಗೂ ದಿಢೀರ್ ಪ್ರವಾಹದಿಂದ ಇದುವರೆಗೆ ಕಣಿವೆ ರಾಜ್ಯದಲ್ಲಿ 11 ಮಂದಿ ಮೃತಪಟ್ಟಿದ್ದು, ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗಿದೆ. ಇದೇ ವೇಳೆ  ಉತ್ತರಾಖಂಡ್ ನ ವಿವಿಧ ಸ್ಥಳಗಳಲ್ಲೂ ನಿನ್ನೆ ಮೇಘಸ್ಫೋಟದ ಘಟನೆಗಳು ವರದಿಯಾಗಿವೆ.  ರುದ್ರಪ್ರಯಾಗ ಜಿಲ್ಲೆಯ ತೆಂಡ್ವಾಲ್  ಗ್ರಾಮದಲ್ಲಿ  ಮಹಿಳೆಯೊಬ್ಬರು ಮೃತಪಟ್ಟಿದ್ದು, 18 ರಿಂದ 20 ಮಂದಿ ಕಾಣೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ದೇವಲ್ ಬ್ಲಾಕ್ ನಲ್ಲಿ  20 ಜಾನುವಾರುಗಳು ಮೃತಪಟ್ಟಿವೆ. ತೆಹ್ರಿ, ರುದ್ರಪ್ರಯಾಗ್, ಜಕೋಲಿ, ಬಂಗಾರ್ ಸೇರಿದಂತೆ  ಹಲವು ಸ್ಥಳಗಳಲ್ಲಿ ಮೇಘ ಸ್ಫೋಟ ಹಾಗೂ ಅತಿವೃಷ್ಟಿಯಿಂದ ಭಾರೀ ಪ್ರಮಾಣದಲ್ಲಿ ಹಾನಿಯಾಗಿರುವುದಾಗಿ ವರದಿಯಾಗಿದೆ. ಇದೇ ವೇಳೆ  ಇಂದು ಸಹ  ರಾಜಸ್ತಾನ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶಗಳಲ್ಲಿ ಮುಂದಿನ ಎರಡು ಮೂರು ದಿನಗಳ  ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅಂಡಮಾನ್- ನಿಕೋಬಾರ್ ದ್ವೀಪ ಸಮೂಹದಲ್ಲೂ ಬಿರುಗಾಳಿ ಸಹಿತ  ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

2 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

3 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

3 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

7 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago