Advertisement
ವೆದರ್ ಮಿರರ್

ಹವಾಮಾನ ವರದಿ | 30-08-2025 | ಸೆ.2 ರಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ..! ಕಾರಣ ಏನು..?

Share

31.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಅವಧಿಯ ಬಿಸಿಲು ಇರಬಹುದು. ಈಗಿನಂತೆ ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಸೆಪ್ಟೆಂಬರ್ 1 ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2 ರಿಂದ ಮತ್ತೆ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಮಳೆಯು ಸೆಪ್ಟೆಂಬರ್ 7ರ ತನಕ ಮುಂದುವರಿಯುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 1 ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, 2 ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

ಒಳನಾಡು : ಉತ್ತರ ಒಳನಾಡಿನ ಬೀದರ್ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಾವಣಗೆರೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.  ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಭಾರಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.

ಸೆಪ್ಟೆಂಬರ್ 2 ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 6ರಂದು ಮಹಾರಾಷ್ಟ್ರ, ಗುಜರಾತ್ ತಲಪುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

3 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

6 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

13 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

19 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago