Advertisement
ಸುದ್ದಿಗಳು

#AnnabhagyaScheme | ಅನ್ನಭಾಗ್ಯ ಪಡೆಯಲು ಮತ್ತಷ್ಟು ವಿಘ್ನ | 6 ಲಕ್ಷ ಮಂದಿಗೆ ಹಣ ಸಿಗೋದು ಡೌಟು…!

Share

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ  ಗ್ಯಾರಂಟಿ #Guarantee ಗಳದ್ದು ಸದ್ದು. ಉಚಿತ ಬಸ್ ಶಕ್ತಿ ಯೋಜನೆ, ಗೃಹಜ್ಯೋತಿ, ನಂತರ ಗೃಹ ಲಕ್ಷ್ಮಿ ಯೋಜನೆ ಇನ್ನೂ ಅರ್ಜಿ ಹಂತದಲ್ಲಿದೆ. ಈಗ ಅನ್ನಭಾಗ್ಯ ಯೋಜನೆ ಜಾರಿಗೆ ಬರುತ್ತೋ ಇಲ್ವೋ ಅನ್ನೋ ಗೊಂದಲ. ಅಂತೂ ಇಂತೂ ಅಕ್ಕಿ ಸಿಗಲ್ಲ, ಕೊನೆಗೆ ಖಾತೆಗೆ ಹಣ ಬರುತ್ತೆ ಅಂತ ಹೇಳುವ ಮೂಲಕ ಸರ್ಕಾರ ಈ ಯೋಜನೆಯ ಗೊಂದಲಕ್ಕೆ ಅಂತ್ಯ ಹಾಡಿದೆ. ಆದರೆ ಇದೀಗ ಅನ್ನಭಾಗ್ಯ #AnnabhagyaScheme ದಿಂದ 6 ಲಕ್ಷ ಜನ ಹೊರಗುಳಿಯುತ್ತಾರಾ ಎಂಬ  ಅನುಮಾನ ಮೂಡಿದೆ. 6 ಲಕ್ಷ ಜನರ ದಾಖಲೆ ಇಲ್ಲದಿರುವುದು ಆಹಾರ ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಲಿಂಕ್ ಮಾಡದವರ ಖಾತೆಗಳಿಗೆ ಹಣ ಸಿಗುವುದಿಲ್ಲ.

ಯಾರಿಗೆಲ್ಲ ಸಿಗಲ್ಲ ದುಡ್ಡು..?: ರಾಜ್ಯದಲ್ಲಿ 6 ಲಕ್ಷ ಜನ ಬಿಪಿಎಲ್ ಕಾರ್ಡ್‍ದಾರರ #BPL Card ಬ್ಯಾಂಕ್ ಖಾತೆ ಆಧಾರ್ ಗೆ ಲಿಂಕ್  ಆಗಿಲ್ಲ. ಇವರು ಲಿಂಕ್ ಮಾಡಿಸುವವರೆಗೆ ದುಡ್ಡು ಬರಲ್ಲ. ಈಗ ಲಿಂಕ್ ಮಾಡಿದ್ದರೆ ಜುಲೈ 2ನೇ ವಾರದಲ್ಲಿ ಹಣ ಬರುವ ಸಾಧ್ಯತೆಗಳಿವೆ.

ಇಂದು ದುಡ್ಡು ಬರಲ್ಲ ಯಾಕೆ?: ಅಧಿಕಾರಿಗಳು ಪ್ರತಿ ಅಕೌಂಟ್‍ನ ಡೇಟಾ ಪರಿಶೀಲಿಸಬೇಕು. ಕುಟುಂಬದ ಸದಸ್ಯರು ಎಷ್ಟು ಜನ, ಎಷ್ಟು ದುಡ್ಡು ಕಳಿಸಬೇಕು ಅಂತಾ ಪರಿಶೀಲಿಸಬೇಕು. ಆಧಾರ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಪರಿಶೀಲಿಸಬೇಕು. ಖಾತೆ ನಿಷ್ಕ್ರಿಯವಾದರೆ ದುಡ್ಡು ಬೌನ್ಸ್ ಆಗಿ ವಾಪಸ್ ಬರುತ್ತೆ. ಹೀಗಾಗಿ ಕೆಲ ಸಮಯ ಬೇಕಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿ ಕೊಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು. ಆದರೆ ಈಗ ಅಗತ್ಯ ಪ್ರಮಾಣದ ಅಕ್ಕಿ ಸಿಕ್ಕಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಹಾಗೂ ಬಾಕಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಸರ್ಕಾರ ತಿಳಿಸಿದೆ. ಪ್ರತಿ ಕೆಜಿಗೆ 34 ರೂ. ಲೆಕ್ಕದಲ್ಲಿ ತಲಾ ಒಬ್ಬರಿಗೆ 170 ರೂ. ಸಿಗಲಿದೆ. ಬಿಪಿಎಲ್ ಕಾರ್ಡ್‍ದಾರರ ಅಕೌಂಟ್‍ಗೆ ದುಡ್ಡು ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಅನ್ನಭಾಗ್ಯದ ದುಡ್ಡು ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ಬೀಳಲು ಷರತ್ತುಗಳು ಅನ್ವಯವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

10 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

22 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

24 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago