ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಫಿಲೋಮಿನಾ ಕಾಲೇಜು ಪ್ರೌಢಶಾಲೆಯ ಎನ್ ಸಿ ಸಿ ಘಟಕಗಳು ಹಾಗೂ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜಾಥಾವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ|ಡಾ| ಆಂಟೊನಿ ಪ್ರಕಾಶ್ ಮೊಂತೆರೊ ಮಾತನಾಡಿ, “ಯುವ ಶಕ್ತಿಯು ರಾಷ್ಟ್ರದ ಪ್ರಬಲ ಶಕ್ತಿಯಾಗಿದೆ. ಆದರೆ ಇಂದಿನ ಯುವಕರು ಮಾದಕ ದ್ರವ್ಯ ಸೇವನೆಯ ವ್ಯಸನಕ್ಕೆ ತುತ್ತಾಗಿ ಹಲವಾರು ರೋಗಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಇದು ದೇಶದ ಆರ್ಥಿಕತೆ ಹಾಗೂ ಪ್ರಗತಿಗೆ ಮಾರಕವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರ ದುಷ್ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸುವ ಎನ್ ಸಿ ಸಿ ಕೆಡೆಟ್ ಗಳ ಈ ಪುಟ್ಟ ಪ್ರಯತ್ನ ಅಭಿನಂದನಾರ್ಹ” ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ್ ರಾಥೋಡ್ “ಮಾದಕ ದ್ರವ್ಯವನ್ನು ತಯಾರಿಸುವುದು, ಸರಬರಾಜು ಮಾಡುವುದು ಹಾಗೂ ಸೇವಿಸುವುದು ಇವೆಲ್ಲವೂ ಶಿಕ್ಷಾರ್ಹ ಅಪರಾಧಗಳಾಗಿವೆ. ಇಂತಹ ಪಿಡುಗು ಇಂದಿನ ಯುವ ಜನತೆಯನ್ನು ದಾರಿ ತಪ್ಪಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ ಅತಿ ಅಗತ್ಯ. ಮಾದಕ ದ್ರವ್ಯಗಳ ಕಳ್ಳ ಸಾಗಣೆಯನ್ನು ಹಾಗೂ ಅವುಗಳ ಬಳಕೆಯನ್ನು ತಡೆಗಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯುವಜನರ ಸಹಾಯ ಅಗತ್ಯ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಬಳಕೆ ಹಾಗೂ ಸಾಗಾಣಿಕೆಗೆ ಪ್ರೋತ್ಸಾಹ ನೀಡುವುದಿಲ್ಲ ಎಂದು ಎನ್ ಸಿ ಸಿ ಕೆಡೆಟ್ ಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಅಶೋಕ್ ರಯಾನ್ ಕ್ರಾಸ್ತ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ| ಮ್ಯಾಕ್ಸಿಮ್ ಡಿಸೋಜ, ಹವಾಲ್ದಾರ್ ತಂಗವೇಲು, ಹವಾಲ್ದಾರ್ ಸುರೇಶ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಎನ್ ಸಿ ಸಿ ಅಧಿಕಾರಿಯಾದ ಲೆಫ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೆರಾ, ನೌಕಾದಳದ ಅಧಿಕಾರಿಯಾದ ತೇಜಸ್ವಿ ಭಟ್, ಸಂತ ಫಿಲೋಮಿನಾ ಪ್ರೌಢಶಾಲೆಯ ಎನ್ ಸಿ ಸಿ ಅಧಿಕಾರಿಗಳಾದ ನರೇಶ್ ಲೋಬೋ, ಕ್ಲೆಮೆಂಟ್ ಪಿಂಟೋ, ಹಾಗೂ ರೋಶನ್ ಸಿಕ್ವೆರಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಯ ಸಂಯೋಜಕರಾದ ಪೌಲ್ ಹೆರಾಲ್ಡ್ ಮಸ್ಕರೇಞಸ್ ಕಾರ್ಯಕ್ರಮ ನಿರೂಪಿಸಿದರು.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…