Advertisement
ಸುದ್ದಿಗಳು

#DrugAbuseDay | ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

Share

ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಫಿಲೋಮಿನಾ ಕಾಲೇಜು ಪ್ರೌಢಶಾಲೆಯ ಎನ್ ಸಿ ಸಿ ಘಟಕಗಳು ಹಾಗೂ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜಾಥಾವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ|ಡಾ| ಆಂಟೊನಿ ಪ್ರಕಾಶ್ ಮೊಂತೆರೊ ಮಾತನಾಡಿ,  “ಯುವ ಶಕ್ತಿಯು ರಾಷ್ಟ್ರದ ಪ್ರಬಲ ಶಕ್ತಿಯಾಗಿದೆ. ಆದರೆ ಇಂದಿನ ಯುವಕರು ಮಾದಕ ದ್ರವ್ಯ ಸೇವನೆಯ ವ್ಯಸನಕ್ಕೆ ತುತ್ತಾಗಿ ಹಲವಾರು ರೋಗಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಇದು ದೇಶದ ಆರ್ಥಿಕತೆ ಹಾಗೂ ಪ್ರಗತಿಗೆ ಮಾರಕವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರ ದುಷ್ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸುವ ಎನ್ ಸಿ ಸಿ ಕೆಡೆಟ್‌ ಗಳ  ಈ ಪುಟ್ಟ ಪ್ರಯತ್ನ ಅಭಿನಂದನಾರ್ಹ” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ್ ರಾಥೋಡ್ “ಮಾದಕ ದ್ರವ್ಯವನ್ನು ತಯಾರಿಸುವುದು, ಸರಬರಾಜು ಮಾಡುವುದು ಹಾಗೂ ಸೇವಿಸುವುದು ಇವೆಲ್ಲವೂ ಶಿಕ್ಷಾರ್ಹ ಅಪರಾಧಗಳಾಗಿವೆ. ಇಂತಹ ಪಿಡುಗು ಇಂದಿನ ಯುವ ಜನತೆಯನ್ನು ದಾರಿ ತಪ್ಪಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ ಅತಿ ಅಗತ್ಯ. ಮಾದಕ ದ್ರವ್ಯಗಳ ಕಳ್ಳ ಸಾಗಣೆಯನ್ನು ಹಾಗೂ ಅವುಗಳ ಬಳಕೆಯನ್ನು ತಡೆಗಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯುವಜನರ ಸಹಾಯ ಅಗತ್ಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಬಳಕೆ ಹಾಗೂ ಸಾಗಾಣಿಕೆಗೆ ಪ್ರೋತ್ಸಾಹ ನೀಡುವುದಿಲ್ಲ ಎಂದು ಎನ್ ಸಿ ಸಿ ಕೆಡೆಟ್ ಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಅಶೋಕ್ ರಯಾನ್ ಕ್ರಾಸ್ತ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ| ಮ್ಯಾಕ್ಸಿಮ್ ಡಿಸೋಜ, ಹವಾಲ್ದಾರ್ ತಂಗವೇಲು, ಹವಾಲ್ದಾರ್ ಸುರೇಶ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಎನ್ ಸಿ ಸಿ ಅಧಿಕಾರಿಯಾದ ಲೆಫ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೆರಾ, ನೌಕಾದಳದ ಅಧಿಕಾರಿಯಾದ ತೇಜಸ್ವಿ ಭಟ್, ಸಂತ ಫಿಲೋಮಿನಾ ಪ್ರೌಢಶಾಲೆಯ ಎನ್ ಸಿ ಸಿ ಅಧಿಕಾರಿಗಳಾದ ನರೇಶ್ ಲೋಬೋ, ಕ್ಲೆಮೆಂಟ್ ಪಿಂಟೋ, ಹಾಗೂ ರೋಶನ್ ಸಿಕ್ವೆರಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಯ ಸಂಯೋಜಕರಾದ ಪೌಲ್ ಹೆರಾಲ್ಡ್ ಮಸ್ಕರೇಞಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago