Advertisement
ಸುದ್ದಿಗಳು

#DrugAbuseDay | ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ

Share

ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಫಿಲೋಮಿನಾ ಕಾಲೇಜು ಪ್ರೌಢಶಾಲೆಯ ಎನ್ ಸಿ ಸಿ ಘಟಕಗಳು ಹಾಗೂ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಬಳಕೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜಾಥಾವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ವಂ|ಡಾ| ಆಂಟೊನಿ ಪ್ರಕಾಶ್ ಮೊಂತೆರೊ ಮಾತನಾಡಿ,  “ಯುವ ಶಕ್ತಿಯು ರಾಷ್ಟ್ರದ ಪ್ರಬಲ ಶಕ್ತಿಯಾಗಿದೆ. ಆದರೆ ಇಂದಿನ ಯುವಕರು ಮಾದಕ ದ್ರವ್ಯ ಸೇವನೆಯ ವ್ಯಸನಕ್ಕೆ ತುತ್ತಾಗಿ ಹಲವಾರು ರೋಗಗಳಿಗೆ ಆಹ್ವಾನ ನೀಡುತ್ತಿದ್ದಾರೆ. ಇದು ದೇಶದ ಆರ್ಥಿಕತೆ ಹಾಗೂ ಪ್ರಗತಿಗೆ ಮಾರಕವಾಗಿದೆ. ಎಲ್ಲಕ್ಕಿಂತ ಮಿಗಿಲಾಗಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರ ದುಷ್ಪರಿಣಾಮಗಳ ಕುರಿತು ಜನರಿಗೆ ಅರಿವು ಮೂಡಿಸುವ ಎನ್ ಸಿ ಸಿ ಕೆಡೆಟ್‌ ಗಳ  ಈ ಪುಟ್ಟ ಪ್ರಯತ್ನ ಅಭಿನಂದನಾರ್ಹ” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಕಾಂತ್ ರಾಥೋಡ್ “ಮಾದಕ ದ್ರವ್ಯವನ್ನು ತಯಾರಿಸುವುದು, ಸರಬರಾಜು ಮಾಡುವುದು ಹಾಗೂ ಸೇವಿಸುವುದು ಇವೆಲ್ಲವೂ ಶಿಕ್ಷಾರ್ಹ ಅಪರಾಧಗಳಾಗಿವೆ. ಇಂತಹ ಪಿಡುಗು ಇಂದಿನ ಯುವ ಜನತೆಯನ್ನು ದಾರಿ ತಪ್ಪಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ ಅತಿ ಅಗತ್ಯ. ಮಾದಕ ದ್ರವ್ಯಗಳ ಕಳ್ಳ ಸಾಗಣೆಯನ್ನು ಹಾಗೂ ಅವುಗಳ ಬಳಕೆಯನ್ನು ತಡೆಗಟ್ಟಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಯುವಜನರ ಸಹಾಯ ಅಗತ್ಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾದಕ ದ್ರವ್ಯಗಳ ಬಳಕೆ ಹಾಗೂ ಸಾಗಾಣಿಕೆಗೆ ಪ್ರೋತ್ಸಾಹ ನೀಡುವುದಿಲ್ಲ ಎಂದು ಎನ್ ಸಿ ಸಿ ಕೆಡೆಟ್ ಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಅಶೋಕ್ ರಯಾನ್ ಕ್ರಾಸ್ತ, ಸಂತ ಫಿಲೋಮಿನಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ| ಮ್ಯಾಕ್ಸಿಮ್ ಡಿಸೋಜ, ಹವಾಲ್ದಾರ್ ತಂಗವೇಲು, ಹವಾಲ್ದಾರ್ ಸುರೇಶ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಎನ್ ಸಿ ಸಿ ಅಧಿಕಾರಿಯಾದ ಲೆಫ್ಟಿನೆಂಟ್ ಜೋನ್ಸನ್ ಡೇವಿಡ್ ಸಿಕ್ವೆರಾ, ನೌಕಾದಳದ ಅಧಿಕಾರಿಯಾದ ತೇಜಸ್ವಿ ಭಟ್, ಸಂತ ಫಿಲೋಮಿನಾ ಪ್ರೌಢಶಾಲೆಯ ಎನ್ ಸಿ ಸಿ ಅಧಿಕಾರಿಗಳಾದ ನರೇಶ್ ಲೋಬೋ, ಕ್ಲೆಮೆಂಟ್ ಪಿಂಟೋ, ಹಾಗೂ ರೋಶನ್ ಸಿಕ್ವೆರಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ ಆಂಟಿ ಡ್ರಗ್ ವಿಜಿಲೆನ್ಸ್ ಸಮಿತಿಯ ಸಂಯೋಜಕರಾದ ಪೌಲ್ ಹೆರಾಲ್ಡ್ ಮಸ್ಕರೇಞಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

3 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

3 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

12 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

13 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

18 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

20 hours ago