ರಾಜ್ಯದಲ್ಲಿ ನಕ್ಸಲ್ ನಿಗ್ರಹ ಘಟಕ ವಿಸರ್ಜನೆ | ನಕ್ಸಲರು ನುಸುಳುವ ಸಾಧ್ಯತೆಯ ಬಗ್ಗೆ ನಿಗಾ | ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

March 22, 2025
2:25 PM

ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ  ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ  ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯದಲ್ಲಿ ನಕ್ಸಲ್ ವಿರೋಧಿ ಘಟಕವನ್ನು ವಿಸರ್ಜಿಸಲು ಆದೇಶ ಹೊರಡಿಸಲಾಗಿದೆ. ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ನಕ್ಸಲರು ನುಸುಳುವ ಸಾಧ್ಯತೆಗಳಿದ್ದು, ಈ ಬಗ್ಗೆ ಕಣ್ಗಾವಲು ಇಡಲು ಗುಪ್ತಚರ ವಿಭಾಗಕ್ಕೆ ಹೊಣೆ ನೀಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ  ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸಭೆಯಲ್ಲಿ ಔಪಚಾರಿಕ ಶರಣಾಗತಿ ಅಂಗೀಕರಿಸಲು ತೀರ್ಮಾನಿಸಲಾಗಿದೆ.  ನಕ್ಸಲ್ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿ ಇದುವರೆಗೂ 22 ಮಂದಿ ಭೂಗತ ನಕ್ಸಲರು ಶರಣಾಗಿದ್ದಾರೆ ಎಂದು ಮೇಲ್ಮನೆಯಲ್ಲಿ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror