ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯದಲ್ಲಿ ನಕ್ಸಲ್ ವಿರೋಧಿ ಘಟಕವನ್ನು ವಿಸರ್ಜಿಸಲು ಆದೇಶ ಹೊರಡಿಸಲಾಗಿದೆ. ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ನಕ್ಸಲರು ನುಸುಳುವ ಸಾಧ್ಯತೆಗಳಿದ್ದು, ಈ ಬಗ್ಗೆ ಕಣ್ಗಾವಲು ಇಡಲು ಗುಪ್ತಚರ ವಿಭಾಗಕ್ಕೆ ಹೊಣೆ ನೀಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸಭೆಯಲ್ಲಿ ಔಪಚಾರಿಕ ಶರಣಾಗತಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ನಕ್ಸಲ್ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿ ಇದುವರೆಗೂ 22 ಮಂದಿ ಭೂಗತ ನಕ್ಸಲರು ಶರಣಾಗಿದ್ದಾರೆ ಎಂದು ಮೇಲ್ಮನೆಯಲ್ಲಿ ಮಾಹಿತಿ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…