ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯದಲ್ಲಿ ನಕ್ಸಲ್ ವಿರೋಧಿ ಘಟಕವನ್ನು ವಿಸರ್ಜಿಸಲು ಆದೇಶ ಹೊರಡಿಸಲಾಗಿದೆ. ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ನಕ್ಸಲರು ನುಸುಳುವ ಸಾಧ್ಯತೆಗಳಿದ್ದು, ಈ ಬಗ್ಗೆ ಕಣ್ಗಾವಲು ಇಡಲು ಗುಪ್ತಚರ ವಿಭಾಗಕ್ಕೆ ಹೊಣೆ ನೀಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸಭೆಯಲ್ಲಿ ಔಪಚಾರಿಕ ಶರಣಾಗತಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ನಕ್ಸಲ್ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿ ಇದುವರೆಗೂ 22 ಮಂದಿ ಭೂಗತ ನಕ್ಸಲರು ಶರಣಾಗಿದ್ದಾರೆ ಎಂದು ಮೇಲ್ಮನೆಯಲ್ಲಿ ಮಾಹಿತಿ ನೀಡಿದ್ದಾರೆ.
ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ…
ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಐಸಿಎಆರ್ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ…
ಊರಲ್ಲಿ ಮಂದರ್ತಿ ಮೇಳದ ಹರಕೆಯಾಟ ಇದೆ ಬನ್ನಿ ಅಂತಲೋ , ಸತ್ಯನಾರಾಯಣ ಪೂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ…
ಶನಿ ಅಂದಾಗ ನಮ್ಮ ಮನಸ್ಸು ಅಲರ್ಟ್ ಆಗುತ್ತದೆ. ಜ್ಯೋತಿಷ್ಯರ ನೆನಪಾಗುತ್ತದೆ. ಜಾತಕವನ್ನು ಹುಡುಕುತ್ತೇವೆ.…