ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯದಲ್ಲಿ ನಕ್ಸಲ್ ವಿರೋಧಿ ಘಟಕವನ್ನು ವಿಸರ್ಜಿಸಲು ಆದೇಶ ಹೊರಡಿಸಲಾಗಿದೆ. ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ನಕ್ಸಲರು ನುಸುಳುವ ಸಾಧ್ಯತೆಗಳಿದ್ದು, ಈ ಬಗ್ಗೆ ಕಣ್ಗಾವಲು ಇಡಲು ಗುಪ್ತಚರ ವಿಭಾಗಕ್ಕೆ ಹೊಣೆ ನೀಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸಭೆಯಲ್ಲಿ ಔಪಚಾರಿಕ ಶರಣಾಗತಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ನಕ್ಸಲ್ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿ ಇದುವರೆಗೂ 22 ಮಂದಿ ಭೂಗತ ನಕ್ಸಲರು ಶರಣಾಗಿದ್ದಾರೆ ಎಂದು ಮೇಲ್ಮನೆಯಲ್ಲಿ ಮಾಹಿತಿ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…