ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ರಾಜ್ಯದಲ್ಲಿ ನಕ್ಸಲ್ ವಿರೋಧಿ ಘಟಕವನ್ನು ವಿಸರ್ಜಿಸಲು ಆದೇಶ ಹೊರಡಿಸಲಾಗಿದೆ. ಕೇರಳ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಿಂದ ನಕ್ಸಲರು ನುಸುಳುವ ಸಾಧ್ಯತೆಗಳಿದ್ದು, ಈ ಬಗ್ಗೆ ಕಣ್ಗಾವಲು ಇಡಲು ಗುಪ್ತಚರ ವಿಭಾಗಕ್ಕೆ ಹೊಣೆ ನೀಡಲಾಗಿದೆ ಎಂದು ವಿವರಿಸಿದರು. ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸಭೆಯಲ್ಲಿ ಔಪಚಾರಿಕ ಶರಣಾಗತಿ ಅಂಗೀಕರಿಸಲು ತೀರ್ಮಾನಿಸಲಾಗಿದೆ. ನಕ್ಸಲ್ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿ ಇದುವರೆಗೂ 22 ಮಂದಿ ಭೂಗತ ನಕ್ಸಲರು ಶರಣಾಗಿದ್ದಾರೆ ಎಂದು ಮೇಲ್ಮನೆಯಲ್ಲಿ ಮಾಹಿತಿ ನೀಡಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…