ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ ನಾಡಿನ ಸಮಾಚಾರ ಸೇವಾ ಸಂಘ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ನ್ನು ಪ್ರದಾನ ಮಾಡಲಾಯಿತು.
ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಕೊಡಮಾಡಿದ ಈ ಪ್ರಶಸ್ತಿಯನ್ನು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆದ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹುಕ್ಕೇರಿಯ ಚರಂತೇಶ್ವರ ಮಠದ ಶ್ರೀ ಶರಣ ಬಸವ ದೇವರು ಪ್ರದಾನ ಮಾಡಿದರು.
ಸಾಹಿತಿ, ಕವಿ ಶರಜೂ ಕಾಟ್ಕರ್ , ಸಾವಿತ್ರಿಬಾಯಿ ಪುಲೆ ಚಲನಚಿತ್ರ ನಿರ್ಮಾಪಕ ಬಸವರಾಜ್ ಭೂತಾಳಿ, ನಾಡಿನ ಸಮಾಚಾರ ಸೇವಾ ಸಂಘದ ಅಧ್ಯಕ್ಷ ಬಸವರಾಜ್ ವಾಯ್ ಉಪ್ಪಾರಹಟ್ಟಿ ಮೊದಲಾದ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…