ಭಾರತದ ಆರ್ಗ್ಯಾನಿಕ್ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ವಿಸ್ತರಣೆ ಗುರಿಯೊಂದಿಗೆ APEDA (ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ)ವು ಗುವಾಹಟಿಯಲ್ಲಿ ಆರ್ಗ್ಯಾನಿಕ್ ಕಾಂಕ್ಲೇವ್-ಕಮ್ ಬೈಯರ್–ಸೆಲ್ಲರ್ ಮೀಟ್ ಆಯೋಜಿಸಿದೆ.
ಈ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರದ ಸಹಯೋಗದಲ್ಲಿ ನಡೆಸಲಾಗಿದ್ದು, ಅಸ್ಸಾಂ ರಾಜ್ಯದ ಸಾವಯವ ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳಿಗೆ ಹೊಸ ರಫ್ತು ಅವಕಾಶಗಳನ್ನು ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ 30ಕ್ಕೂ ಹೆಚ್ಚು ರಫ್ತುದಾರರು, 9 ಅಂತರರಾಷ್ಟ್ರೀಯ ಆಮದುದಾರರು ಹಾಗೂ 50ಕ್ಕೂ ಹೆಚ್ಚು ರೈತ ಉತ್ಪಾದಕ ಕಂಪನಿಗಳು (FPOs) ಭಾಗವಹಿಸಿ ನೇರ ವ್ಯಾಪಾರ ಸಂವಾದ ನಡೆಸಿದರು. ಇದರಿಂದ ರೈತರು ಮತ್ತು ಉತ್ಪಾದಕ ಸಂಘಗಳಿಗೆ ಮಾರುಕಟ್ಟೆ ಸಂಪರ್ಕ ಬಲವಾಗುವ ನಿರೀಕ್ಷೆ ಇದೆ.
ಅಸ್ಸಾಂನ ಸಾವಯವ ಉತ್ಪನ್ನಗಳಿಗೆ ಜಾಗತಿಕ ಬೇಡಿಕೆ : ಅಸ್ಸಾಂನ ವೈವಿಧ್ಯಮಯ ಹವಾಮಾನದಿಂದ ಉತ್ಪಾದನೆಯಾಗುವ ಜೋಹಾ ಅಕ್ಕಿ, ವಿಶೇಷ ಅಕ್ಕಿ ತಳಿಗಳು, ಬಾಳೆ, ಅನಾನಸ್, ಮಂಡರಿನ್ ಕಿತ್ತಳೆ, ಅಸ್ಸಾಂ ಲಿಂಬೆ, ಜೊತೆಗೆ ಶುಂಠಿ, ಅರಿಶಿನ, ಕರಿಮೆಣಸು ಮೊದಲಾದ ಆರ್ಗ್ಯಾನಿಕ್ ಮಸಾಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಹೊಂದಿವೆ ಎಂದು ತಜ್ಞರು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಪ್ರಮಾಣೀಕರಣ ಮತ್ತು ಮಾನದಂಡಗಳ ಕುರಿತು ಜಾಗೃತಿ : ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಸಾವಯವ ಉತ್ಪಾದನಾ ಕಾರ್ಯಕ್ರಮ (NPOP) – 8ನೇ ಆವೃತ್ತಿ ಕುರಿತು ಜಾಗೃತಿ ಸತ್ರವನ್ನು ಆಯೋಜಿಸಲಾಗಿದ್ದು, ಲೇಬಲಿಂಗ್, ಪ್ರಮಾಣೀಕರಣ ಹಾಗೂ ಅಂತರರಾಷ್ಟ್ರೀಯ ಮಾನದಂಡಗಳ ಕುರಿತು ರಫ್ತುದಾರರು ಮತ್ತು ರೈತ ಸಂಘಗಳಿಗೆ ಮಾಹಿತಿ ನೀಡಲಾಯಿತು.
ಅಸ್ಸಾಂ ಕೃಷಿ ಸಚಿವರು ರಾಜ್ಯದ ಸಾವಯವ ಕೃಷಿ ಸಾಮರ್ಥ್ಯವನ್ನು ಉಲ್ಲೇಖಿಸಿ, ಸಂಗ್ರಹಣೆ, ಪ್ರಮಾಣೀಕರಣ ಮತ್ತು ಮೌಲ್ಯ ಸರಪಳಿ ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. APEDA ಅಧಿಕಾರಿಗಳು ಹೊಸ ವ್ಯಾಪಾರ ಒಪ್ಪಂದಗಳ ಮೂಲಕ ಸಾವಯವ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಇನ್ನಷ್ಟು ತೆರೆದಿದೆ ಎಂದು ತಿಳಿಸಿದರು. ಈ ಸಮಾವೇಶ ಅಸ್ಸಾಂನ ರೈತರಿಗೆ ಮಾತ್ರವಲ್ಲದೆ, ದೇಶದ ಆರ್ಗ್ಯಾನಿಕ್ ಕೃಷಿ ರಫ್ತು ಕ್ಷೇತ್ರಕ್ಕೆ ಹೊಸ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…