Advertisement
MIRROR FOCUS

ಗುವಾಹಟಿಯಲ್ಲಿ ಸಾವಯವ ಉತ್ಪನ್ನ ಖರೀದಿದಾರರು ಹಾಗೂ ಮಾರಾಟಗಾರರ ಸಮಾವೇಶ : ಕೃಷಿ ರಪ್ತಿಗೆ ಬಲ

Share

ಭಾರತದ ಆರ್ಗ್ಯಾನಿಕ್‌ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ವಿಸ್ತರಣೆ ಗುರಿಯೊಂದಿಗೆ APEDA (ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ)ವು ಗುವಾಹಟಿಯಲ್ಲಿ ಆರ್ಗ್ಯಾನಿಕ್‌ ಕಾಂಕ್ಲೇವ್‌-ಕಮ್‌ ಬೈಯರ್‌–ಸೆಲ್ಲರ್‌ ಮೀಟ್‌  ಆಯೋಜಿಸಿದೆ.

ಈ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರದ ಸಹಯೋಗದಲ್ಲಿ ನಡೆಸಲಾಗಿದ್ದು, ಅಸ್ಸಾಂ ರಾಜ್ಯದ ಸಾವಯವ ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳಿಗೆ ಹೊಸ ರಫ್ತು ಅವಕಾಶಗಳನ್ನು ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.  ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ 30ಕ್ಕೂ ಹೆಚ್ಚು ರಫ್ತುದಾರರು, 9 ಅಂತರರಾಷ್ಟ್ರೀಯ ಆಮದುದಾರರು ಹಾಗೂ 50ಕ್ಕೂ ಹೆಚ್ಚು ರೈತ ಉತ್ಪಾದಕ ಕಂಪನಿಗಳು (FPOs) ಭಾಗವಹಿಸಿ ನೇರ ವ್ಯಾಪಾರ ಸಂವಾದ ನಡೆಸಿದರು. ಇದರಿಂದ ರೈತರು ಮತ್ತು ಉತ್ಪಾದಕ ಸಂಘಗಳಿಗೆ ಮಾರುಕಟ್ಟೆ ಸಂಪರ್ಕ ಬಲವಾಗುವ ನಿರೀಕ್ಷೆ ಇದೆ.

ಅಸ್ಸಾಂನ ಸಾವಯವ ಉತ್ಪನ್ನಗಳಿಗೆ ಜಾಗತಿಕ ಬೇಡಿಕೆ :  ಅಸ್ಸಾಂನ ವೈವಿಧ್ಯಮಯ ಹವಾಮಾನದಿಂದ ಉತ್ಪಾದನೆಯಾಗುವ ಜೋಹಾ ಅಕ್ಕಿ, ವಿಶೇಷ ಅಕ್ಕಿ ತಳಿಗಳು, ಬಾಳೆ, ಅನಾನಸ್‌, ಮಂಡರಿನ್‌ ಕಿತ್ತಳೆ, ಅಸ್ಸಾಂ ಲಿಂಬೆ, ಜೊತೆಗೆ ಶುಂಠಿ, ಅರಿಶಿನ, ಕರಿಮೆಣಸು ಮೊದಲಾದ ಆರ್ಗ್ಯಾನಿಕ್‌ ಮಸಾಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಹೊಂದಿವೆ ಎಂದು ತಜ್ಞರು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪ್ರಮಾಣೀಕರಣ ಮತ್ತು ಮಾನದಂಡಗಳ ಕುರಿತು ಜಾಗೃತಿ :  ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಸಾವಯವ ಉತ್ಪಾದನಾ ಕಾರ್ಯಕ್ರಮ (NPOP) – 8ನೇ ಆವೃತ್ತಿ ಕುರಿತು ಜಾಗೃತಿ ಸತ್ರವನ್ನು ಆಯೋಜಿಸಲಾಗಿದ್ದು, ಲೇಬಲಿಂಗ್‌, ಪ್ರಮಾಣೀಕರಣ ಹಾಗೂ ಅಂತರರಾಷ್ಟ್ರೀಯ ಮಾನದಂಡಗಳ ಕುರಿತು ರಫ್ತುದಾರರು ಮತ್ತು ರೈತ ಸಂಘಗಳಿಗೆ ಮಾಹಿತಿ ನೀಡಲಾಯಿತು.

ಅಸ್ಸಾಂ ಕೃಷಿ ಸಚಿವರು ರಾಜ್ಯದ ಸಾವಯವ ಕೃಷಿ ಸಾಮರ್ಥ್ಯವನ್ನು ಉಲ್ಲೇಖಿಸಿ, ಸಂಗ್ರಹಣೆ, ಪ್ರಮಾಣೀಕರಣ ಮತ್ತು ಮೌಲ್ಯ ಸರಪಳಿ ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. APEDA ಅಧಿಕಾರಿಗಳು ಹೊಸ ವ್ಯಾಪಾರ ಒಪ್ಪಂದಗಳ ಮೂಲಕ ಸಾವಯವ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಇನ್ನಷ್ಟು ತೆರೆದಿದೆ ಎಂದು ತಿಳಿಸಿದರು. ಈ ಸಮಾವೇಶ ಅಸ್ಸಾಂನ ರೈತರಿಗೆ ಮಾತ್ರವಲ್ಲದೆ, ದೇಶದ ಆರ್ಗ್ಯಾನಿಕ್‌ ಕೃಷಿ ರಫ್ತು ಕ್ಷೇತ್ರಕ್ಕೆ ಹೊಸ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

17 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

17 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

18 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

18 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

18 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago