Advertisement
MIRROR FOCUS

ಗುವಾಹಟಿಯಲ್ಲಿ ಸಾವಯವ ಉತ್ಪನ್ನ ಖರೀದಿದಾರರು ಹಾಗೂ ಮಾರಾಟಗಾರರ ಸಮಾವೇಶ : ಕೃಷಿ ರಪ್ತಿಗೆ ಬಲ

Share

ಭಾರತದ ಆರ್ಗ್ಯಾನಿಕ್‌ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ವಿಸ್ತರಣೆ ಗುರಿಯೊಂದಿಗೆ APEDA (ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ)ವು ಗುವಾಹಟಿಯಲ್ಲಿ ಆರ್ಗ್ಯಾನಿಕ್‌ ಕಾಂಕ್ಲೇವ್‌-ಕಮ್‌ ಬೈಯರ್‌–ಸೆಲ್ಲರ್‌ ಮೀಟ್‌  ಆಯೋಜಿಸಿದೆ.

ಈ ಕಾರ್ಯಕ್ರಮವನ್ನು ಅಸ್ಸಾಂ ಸರ್ಕಾರದ ಸಹಯೋಗದಲ್ಲಿ ನಡೆಸಲಾಗಿದ್ದು, ಅಸ್ಸಾಂ ರಾಜ್ಯದ ಸಾವಯವ ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳಿಗೆ ಹೊಸ ರಫ್ತು ಅವಕಾಶಗಳನ್ನು ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.  ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ 30ಕ್ಕೂ ಹೆಚ್ಚು ರಫ್ತುದಾರರು, 9 ಅಂತರರಾಷ್ಟ್ರೀಯ ಆಮದುದಾರರು ಹಾಗೂ 50ಕ್ಕೂ ಹೆಚ್ಚು ರೈತ ಉತ್ಪಾದಕ ಕಂಪನಿಗಳು (FPOs) ಭಾಗವಹಿಸಿ ನೇರ ವ್ಯಾಪಾರ ಸಂವಾದ ನಡೆಸಿದರು. ಇದರಿಂದ ರೈತರು ಮತ್ತು ಉತ್ಪಾದಕ ಸಂಘಗಳಿಗೆ ಮಾರುಕಟ್ಟೆ ಸಂಪರ್ಕ ಬಲವಾಗುವ ನಿರೀಕ್ಷೆ ಇದೆ.

ಅಸ್ಸಾಂನ ಸಾವಯವ ಉತ್ಪನ್ನಗಳಿಗೆ ಜಾಗತಿಕ ಬೇಡಿಕೆ :  ಅಸ್ಸಾಂನ ವೈವಿಧ್ಯಮಯ ಹವಾಮಾನದಿಂದ ಉತ್ಪಾದನೆಯಾಗುವ ಜೋಹಾ ಅಕ್ಕಿ, ವಿಶೇಷ ಅಕ್ಕಿ ತಳಿಗಳು, ಬಾಳೆ, ಅನಾನಸ್‌, ಮಂಡರಿನ್‌ ಕಿತ್ತಳೆ, ಅಸ್ಸಾಂ ಲಿಂಬೆ, ಜೊತೆಗೆ ಶುಂಠಿ, ಅರಿಶಿನ, ಕರಿಮೆಣಸು ಮೊದಲಾದ ಆರ್ಗ್ಯಾನಿಕ್‌ ಮಸಾಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಹೊಂದಿವೆ ಎಂದು ತಜ್ಞರು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಪ್ರಮಾಣೀಕರಣ ಮತ್ತು ಮಾನದಂಡಗಳ ಕುರಿತು ಜಾಗೃತಿ :  ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಸಾವಯವ ಉತ್ಪಾದನಾ ಕಾರ್ಯಕ್ರಮ (NPOP) – 8ನೇ ಆವೃತ್ತಿ ಕುರಿತು ಜಾಗೃತಿ ಸತ್ರವನ್ನು ಆಯೋಜಿಸಲಾಗಿದ್ದು, ಲೇಬಲಿಂಗ್‌, ಪ್ರಮಾಣೀಕರಣ ಹಾಗೂ ಅಂತರರಾಷ್ಟ್ರೀಯ ಮಾನದಂಡಗಳ ಕುರಿತು ರಫ್ತುದಾರರು ಮತ್ತು ರೈತ ಸಂಘಗಳಿಗೆ ಮಾಹಿತಿ ನೀಡಲಾಯಿತು.

ಅಸ್ಸಾಂ ಕೃಷಿ ಸಚಿವರು ರಾಜ್ಯದ ಸಾವಯವ ಕೃಷಿ ಸಾಮರ್ಥ್ಯವನ್ನು ಉಲ್ಲೇಖಿಸಿ, ಸಂಗ್ರಹಣೆ, ಪ್ರಮಾಣೀಕರಣ ಮತ್ತು ಮೌಲ್ಯ ಸರಪಳಿ ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದರು. APEDA ಅಧಿಕಾರಿಗಳು ಹೊಸ ವ್ಯಾಪಾರ ಒಪ್ಪಂದಗಳ ಮೂಲಕ ಸಾವಯವ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಇನ್ನಷ್ಟು ತೆರೆದಿದೆ ಎಂದು ತಿಳಿಸಿದರು. ಈ ಸಮಾವೇಶ ಅಸ್ಸಾಂನ ರೈತರಿಗೆ ಮಾತ್ರವಲ್ಲದೆ, ದೇಶದ ಆರ್ಗ್ಯಾನಿಕ್‌ ಕೃಷಿ ರಫ್ತು ಕ್ಷೇತ್ರಕ್ಕೆ ಹೊಸ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

8 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

8 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

23 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

24 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago