ಕವನ | ಮನದ ಮಿಡಿತ

October 9, 2021
8:48 AM

ರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?

Advertisement
Advertisement

ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ

ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..

ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…

# ಅಪೂರ್ವ ಚೇತನ್ ಪೆರಂದೋಡಿ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?
June 22, 2025
7:00 AM
by: ನಾ.ಕಾರಂತ ಪೆರಾಜೆ
ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್
June 21, 2025
7:00 AM
by: ದಿವ್ಯ ಮಹೇಶ್
ಸಸ್ಯ ಪರಿಚಯ | ಕರ್ಲೆಂಕಿ
June 20, 2025
11:18 PM
by: ಜಯಲಕ್ಷ್ಮಿ ದಾಮ್ಲೆ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group