ಬರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?
ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ
ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..
ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…
# ಅಪೂರ್ವ ಚೇತನ್ ಪೆರಂದೋಡಿ
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…