ಬರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?
ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ
ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..
ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…
# ಅಪೂರ್ವ ಚೇತನ್ ಪೆರಂದೋಡಿ
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…