Advertisement
ಅನುಕ್ರಮ

ಕವನ | ಮನದ ಮಿಡಿತ

Share

ರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?

ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ

ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..

ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

5 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago