ಬರೆಯಬೇಕೆನ್ನಿಸುವುದು,
ಸೂರ್ಯಕಿರಣಗಳು ಭುವಿಯ ಸ್ಪರ್ಶಿಸಿದಾಗ
ಚಂದ್ರನ ಬೆಳದಿಂಗಳಲ್ಲಿ ನಕ್ಷತ್ರಗಳ ಎಣಿಸುವಾಗ
ಬರೆದರೆ ಓದುವರಾರು…?
ನಾನೇನು ಖ್ಯಾತನಾಮನಲ್ಲ, ಕವಿತೆ ಗೀಚಿ ಗೊತ್ತಿಲ್ಲ.
ಬರೆಯಬೇಕೆನ್ನಿಸುವುದು,
ಮಳೆಯಲ್ಲಿ ಮೈ ಮರೆತು ನರ್ತಿಸುವ ನವಿಲಂತೆ
ಒಮ್ಮೊಮ್ಮೆ ನಾನು ಮೈಮರೆತು ಗೀಚುತ್ತೇನೆ
ಓದುವರರಾದರೂ ಸಿಗಬಹುದೆಂಬ ಹಂಬಲದಲ್ಲಿ
ಓದಿ ಮೆಚ್ಚುವರೆಂಬ ಹುಚ್ಚು ನಂಬಿಕೆಯಲ್ಲಿ
ಬರೆಯಬೇಕೆನ್ನಿಸುವುದು,
ಕುಳಿತಲ್ಲಿ , ನಿಂತಲ್ಲಿ ಶಬ್ದಗಳ ಹುಡುಕಾಟ
ಪೆನ್ನು ಹಿಡಿದರೆ ,ಮನದ ಭಾವಗಳ ತಾಕಲಾಟ
ಮನದ ಭಾವಗಳಿಗೆ ದೊರಕದಿದ್ದರೆ ಪ್ರತಿರೂಪ
ಮತ್ತದೇ ನಿರರ್ಥಕ ಭಾವ…..
ಕಠಿಣ ಕಾರ್ಯವೇನಲ್ಲ, ಈ ಬರವಣಿಗೆ
ಸುತ್ತಣದ ವಿಷಯಗಳಿಗೆ ಮನ ಮಿಡಿದಾಗ
ಅಗೋಚರ ಶಕ್ತಿಯೊಂದು ದಾರಿ ತೋರುವುದು
ಕವನಗಳ ಗೀಚಲು ಕವಿ ನಾನಾಗದಿದ್ದರೂ
ಗೀಚಿದ್ದು ಕವಿತೆಯಾದರೆ ಕವಿಯೇ ನಾನಾದೆನಲ್ಲಾ…
# ಅಪೂರ್ವ ಚೇತನ್ ಪೆರಂದೋಡಿ
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…