Advertisement
MIRROR FOCUS

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

Share

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ  ಡಿಕೆ ಸ್ಯಾಂಡ್ ಬಝಾರ್ ಆ್ಯಪ್  ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆ್ಯಪ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. DK SAND BAZAARAPP ಮುಖಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಆನ್‍ಲೈನ್ (DK SAND BAZAARAPP) ಮುಖಾಂತರ ಪಡೆಯಬಹುದು.

15 ಮರಳು ಬ್ಲಾಕ್‍ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್ 5 ರಿಂದ ಅಕ್ಟೋಬರ್ 15 ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್ ಗಳಲ್ಲಿ ಮಾರ್ಚ್ 2025 ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿರುತ್ತದೆ.

ಅಲ್ಲದೆ ILMS (Integrated Lease Management System) ತಂತ್ರಾಂಶದಲ್ಲಿ 36,737 ಮೆ.ಟನ್ ಮರಳು ಸಾಗಾಣಿಕೆಯಾಗಿರುತ್ತದೆ. ಅಲ್ಲದೆ ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ 43,848 ಮೆ.ಟನ್ ಮರಳನ್ನು ಬುಕಿಂಗ್ ಮಾಡಲು dksandbazaar.com ವೆಬ್‍ಸೈಟ್‍ನಲ್ಲಿ ಬುಕ್ ಮಾಡಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಥವಾ  ಡಿಕೆ ಸ್ಯಾಂಡ್ ಬಝಾರ್ ಬುಕಿಂಗ್‍ನಲ್ಲಿ ಯಾವುದೇ ತಾಂತ್ರಿಕ ತೊಂದರೆ ಇದ್ದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯವರ ಕಚೇರಿ (ದೂರವಾಣಿ ಸಂಖ್ಯೆ: 0824-2429932/ 6364019555)   ಸಂಪರ್ಕಿಸಬಹುದು ಎಂದು ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

10 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago