Advertisement
MIRROR FOCUS

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

Share

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ  ಡಿಕೆ ಸ್ಯಾಂಡ್ ಬಝಾರ್ ಆ್ಯಪ್  ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆ್ಯಪ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. DK SAND BAZAARAPP ಮುಖಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಆನ್‍ಲೈನ್ (DK SAND BAZAARAPP) ಮುಖಾಂತರ ಪಡೆಯಬಹುದು.

15 ಮರಳು ಬ್ಲಾಕ್‍ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್ 5 ರಿಂದ ಅಕ್ಟೋಬರ್ 15 ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್ ಗಳಲ್ಲಿ ಮಾರ್ಚ್ 2025 ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿರುತ್ತದೆ.

ಅಲ್ಲದೆ ILMS (Integrated Lease Management System) ತಂತ್ರಾಂಶದಲ್ಲಿ 36,737 ಮೆ.ಟನ್ ಮರಳು ಸಾಗಾಣಿಕೆಯಾಗಿರುತ್ತದೆ. ಅಲ್ಲದೆ ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ 43,848 ಮೆ.ಟನ್ ಮರಳನ್ನು ಬುಕಿಂಗ್ ಮಾಡಲು dksandbazaar.com ವೆಬ್‍ಸೈಟ್‍ನಲ್ಲಿ ಬುಕ್ ಮಾಡಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಥವಾ  ಡಿಕೆ ಸ್ಯಾಂಡ್ ಬಝಾರ್ ಬುಕಿಂಗ್‍ನಲ್ಲಿ ಯಾವುದೇ ತಾಂತ್ರಿಕ ತೊಂದರೆ ಇದ್ದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯವರ ಕಚೇರಿ (ದೂರವಾಣಿ ಸಂಖ್ಯೆ: 0824-2429932/ 6364019555)   ಸಂಪರ್ಕಿಸಬಹುದು ಎಂದು ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

7 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

20 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

20 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago