Advertisement
MIRROR FOCUS

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

Share

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ  ಡಿಕೆ ಸ್ಯಾಂಡ್ ಬಝಾರ್ ಆ್ಯಪ್  ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆ್ಯಪ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. DK SAND BAZAARAPP ಮುಖಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಆನ್‍ಲೈನ್ (DK SAND BAZAARAPP) ಮುಖಾಂತರ ಪಡೆಯಬಹುದು.

15 ಮರಳು ಬ್ಲಾಕ್‍ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್ 5 ರಿಂದ ಅಕ್ಟೋಬರ್ 15 ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್ ಗಳಲ್ಲಿ ಮಾರ್ಚ್ 2025 ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿರುತ್ತದೆ.

ಅಲ್ಲದೆ ILMS (Integrated Lease Management System) ತಂತ್ರಾಂಶದಲ್ಲಿ 36,737 ಮೆ.ಟನ್ ಮರಳು ಸಾಗಾಣಿಕೆಯಾಗಿರುತ್ತದೆ. ಅಲ್ಲದೆ ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ 43,848 ಮೆ.ಟನ್ ಮರಳನ್ನು ಬುಕಿಂಗ್ ಮಾಡಲು dksandbazaar.com ವೆಬ್‍ಸೈಟ್‍ನಲ್ಲಿ ಬುಕ್ ಮಾಡಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಥವಾ  ಡಿಕೆ ಸ್ಯಾಂಡ್ ಬಝಾರ್ ಬುಕಿಂಗ್‍ನಲ್ಲಿ ಯಾವುದೇ ತಾಂತ್ರಿಕ ತೊಂದರೆ ಇದ್ದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯವರ ಕಚೇರಿ (ದೂರವಾಣಿ ಸಂಖ್ಯೆ: 0824-2429932/ 6364019555)   ಸಂಪರ್ಕಿಸಬಹುದು ಎಂದು ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

2 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

2 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

7 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago