Advertisement
MIRROR FOCUS

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

Share

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ  ಡಿಕೆ ಸ್ಯಾಂಡ್ ಬಝಾರ್ ಆ್ಯಪ್  ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆ್ಯಪ್‍ನಲ್ಲಿ ನೋಂದಾಯಿಸಿಕೊಳ್ಳಬಹುದು. DK SAND BAZAARAPP ಮುಖಾಂತರ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು ಆನ್‍ಲೈನ್ (DK SAND BAZAARAPP) ಮುಖಾಂತರ ಪಡೆಯಬಹುದು.

15 ಮರಳು ಬ್ಲಾಕ್‍ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್ 5 ರಿಂದ ಅಕ್ಟೋಬರ್ 15 ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್ ಗಳಲ್ಲಿ ಮಾರ್ಚ್ 2025 ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿರುತ್ತದೆ.

ಅಲ್ಲದೆ ILMS (Integrated Lease Management System) ತಂತ್ರಾಂಶದಲ್ಲಿ 36,737 ಮೆ.ಟನ್ ಮರಳು ಸಾಗಾಣಿಕೆಯಾಗಿರುತ್ತದೆ. ಅಲ್ಲದೆ ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ 43,848 ಮೆ.ಟನ್ ಮರಳನ್ನು ಬುಕಿಂಗ್ ಮಾಡಲು dksandbazaar.com ವೆಬ್‍ಸೈಟ್‍ನಲ್ಲಿ ಬುಕ್ ಮಾಡಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಅಥವಾ  ಡಿಕೆ ಸ್ಯಾಂಡ್ ಬಝಾರ್ ಬುಕಿಂಗ್‍ನಲ್ಲಿ ಯಾವುದೇ ತಾಂತ್ರಿಕ ತೊಂದರೆ ಇದ್ದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯವರ ಕಚೇರಿ (ದೂರವಾಣಿ ಸಂಖ್ಯೆ: 0824-2429932/ 6364019555)   ಸಂಪರ್ಕಿಸಬಹುದು ಎಂದು ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

5 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

11 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

11 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago