ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ

June 29, 2025
11:14 PM

ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ ಜಮೀನಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಗೊಂದಲ ಏರ್ಪಟ್ಟ ಕಾರಣದಿಂದಾಗಿ ಕೆಂಪು ಕಲ್ಲು ಗಣಿಗಾರಿಕೆಗೆ ಹಾಗೂ ಸಾಗಾಟಕ್ಕೆ ಸಮಸ್ಯೆ ಎದುರಾಗಿರುತ್ತದೆ. ಈ ಕಾರಣದಿಂದ ಕಟ್ಟಡ ಕೆಲಸಗಾರರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುತ್ತಾರೆ . ಈಗಾಗಲೇ ಅತಿಯಾದ ಮಳೆಯ ಕಾರಣಕ್ಕೆ ಕೆಲಸ ಮಾಡಲು ಕಷ್ಟಪಡುತ್ತಿರುವ ಕಟ್ಟಡ ಕಾರ್ಮಿಕರಿಗೆ ಇದೀಗ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು ಕೂಡಲೇ ಕೆಂಪು ಕಲ್ಲು ಗಣಿಗಾರಿಕೆಯನ್ನು ಆಶ್ರಯಿಸಿ ಬದುಕು ನಡೆಸುತ್ತಿರುವ ಸಂತ್ರಸ್ತ ಕಾರ್ಮಿಕರ ನೆರವಿಗೆ ತುರ್ತಾಗಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಅವರು ಬೆಂಗಳೂರಿನ ವಿಕಾಸಸೌದದಲ್ಲಿ ಕಾರ್ಮಿಕ ಸಚಿವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಈ  ಬಗ್ಗೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಪೂರಕವಾಗಿ ಸ್ಪಂದಿಸಿದ್ದು ಕೂಡಲೇ ಸಂಬಂಧಪಟ್ಟ ಸಚಿವರುಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror