Advertisement
ಸುದ್ದಿಗಳು

ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ

Share

ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ ಜಮೀನಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಗೊಂದಲ ಏರ್ಪಟ್ಟ ಕಾರಣದಿಂದಾಗಿ ಕೆಂಪು ಕಲ್ಲು ಗಣಿಗಾರಿಕೆಗೆ ಹಾಗೂ ಸಾಗಾಟಕ್ಕೆ ಸಮಸ್ಯೆ ಎದುರಾಗಿರುತ್ತದೆ. ಈ ಕಾರಣದಿಂದ ಕಟ್ಟಡ ಕೆಲಸಗಾರರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುತ್ತಾರೆ . ಈಗಾಗಲೇ ಅತಿಯಾದ ಮಳೆಯ ಕಾರಣಕ್ಕೆ ಕೆಲಸ ಮಾಡಲು ಕಷ್ಟಪಡುತ್ತಿರುವ ಕಟ್ಟಡ ಕಾರ್ಮಿಕರಿಗೆ ಇದೀಗ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು ಕೂಡಲೇ ಕೆಂಪು ಕಲ್ಲು ಗಣಿಗಾರಿಕೆಯನ್ನು ಆಶ್ರಯಿಸಿ ಬದುಕು ನಡೆಸುತ್ತಿರುವ ಸಂತ್ರಸ್ತ ಕಾರ್ಮಿಕರ ನೆರವಿಗೆ ತುರ್ತಾಗಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಅವರು ಬೆಂಗಳೂರಿನ ವಿಕಾಸಸೌದದಲ್ಲಿ ಕಾರ್ಮಿಕ ಸಚಿವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಈ  ಬಗ್ಗೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಪೂರಕವಾಗಿ ಸ್ಪಂದಿಸಿದ್ದು ಕೂಡಲೇ ಸಂಬಂಧಪಟ್ಟ ಸಚಿವರುಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

13 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

19 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

19 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

1 day ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

2 days ago