Advertisement
ಸುದ್ದಿಗಳು

ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ

Share

ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ ಜಮೀನಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಗೊಂದಲ ಏರ್ಪಟ್ಟ ಕಾರಣದಿಂದಾಗಿ ಕೆಂಪು ಕಲ್ಲು ಗಣಿಗಾರಿಕೆಗೆ ಹಾಗೂ ಸಾಗಾಟಕ್ಕೆ ಸಮಸ್ಯೆ ಎದುರಾಗಿರುತ್ತದೆ. ಈ ಕಾರಣದಿಂದ ಕಟ್ಟಡ ಕೆಲಸಗಾರರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುತ್ತಾರೆ . ಈಗಾಗಲೇ ಅತಿಯಾದ ಮಳೆಯ ಕಾರಣಕ್ಕೆ ಕೆಲಸ ಮಾಡಲು ಕಷ್ಟಪಡುತ್ತಿರುವ ಕಟ್ಟಡ ಕಾರ್ಮಿಕರಿಗೆ ಇದೀಗ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು ಕೂಡಲೇ ಕೆಂಪು ಕಲ್ಲು ಗಣಿಗಾರಿಕೆಯನ್ನು ಆಶ್ರಯಿಸಿ ಬದುಕು ನಡೆಸುತ್ತಿರುವ ಸಂತ್ರಸ್ತ ಕಾರ್ಮಿಕರ ನೆರವಿಗೆ ತುರ್ತಾಗಿ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಜಾನಿ ಕೆ.ಪಿ ಅವರು ಬೆಂಗಳೂರಿನ ವಿಕಾಸಸೌದದಲ್ಲಿ ಕಾರ್ಮಿಕ ಸಚಿವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಈ  ಬಗ್ಗೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಪೂರಕವಾಗಿ ಸ್ಪಂದಿಸಿದ್ದು ಕೂಡಲೇ ಸಂಬಂಧಪಟ್ಟ ಸಚಿವರುಗಳಲ್ಲಿ ಮತ್ತು ಅಧಿಕಾರಿಗಳಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

4 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

11 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

11 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

22 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

22 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago