ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

June 19, 2025
10:59 PM

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು  ರಾಜ್ಯ ಸಚಿವ ಸಂಪುಟ  ತೀರ್ಮಾನಿಸಿದೆ ಎಂದು  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ  ಎಚ್.ಕೆ ಪಾಟೀಲ್  ಹೇಳಿದ್ದಾರೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ  ಸಚಿವ ಸಂಪುಟದ ಸಭೆಯ ನಂತರ ಅವರು,  ಬೆಂಗಳೂರು ಗ್ರಾಮಾಂತರ , ಕೋಲಾರ ಸೇರಿದಂತೆ  ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.  ಮಾವಿನ ದರ  ಕುಸಿದಿರುವುದು ಹಾಗೂ  ಆಂಧ್ರಕ್ಕೆ ಪೂರೈಕೆ ಮಾಡಲು  ನಿರ್ಬಂಧ  ಹೇರಿರುವುದರಿಂದ ರೈತರು ಕಂಗಾಲಾಗಿದ್ದಾರೆ.  ಮಾವು ಬೆಳೆಗಾರರಿಗೆ  ಕೇಂದ್ರದಿಂದ ಹೆಚ್ಚಿನ  ನೆರವನ್ನು ಪಡೆಯುವ ಜವಾಬ್ದಾರಿಯನ್ನು  ಕೃಷಿ ಸಚಿವ  ಚೆಲುವರಾಯಸ್ವಾಮಿ ಅವರಿಗೆ  ವಹಿಸಲಾಗಿದೆ  ಎಂದು ತಿಳಿಸಿದರು.

ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ  ಕೆಲಸ ಮಾಡುತ್ತಿರುವ ಸುಮಾರು 3ಲಕ್ಷ ಸಿಬ್ಬಂದಿ  ಮತ್ತು  ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ  ಟ್ರಸ್ಟ್ ಮೂಲಕ ವಾರ್ಷಿಕವಾಗಿ  5 ಲಕ್ಷ ರೂಪಾಯಿ ವರೆಗೆ ನಗದುರಹಿತ  ಆರೋಗ್ಯ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ  ಪ್ರಾಥಮಿಕ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು  18 ಕೋಟಿ 97 ಲಕ್ಷ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ
July 15, 2025
7:26 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror