Advertisement
ಸುದ್ದಿಗಳು

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

Share

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು  ರಾಜ್ಯ ಸಚಿವ ಸಂಪುಟ  ತೀರ್ಮಾನಿಸಿದೆ ಎಂದು  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ  ಎಚ್.ಕೆ ಪಾಟೀಲ್  ಹೇಳಿದ್ದಾರೆ.

Advertisement
Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ  ಸಚಿವ ಸಂಪುಟದ ಸಭೆಯ ನಂತರ ಅವರು,  ಬೆಂಗಳೂರು ಗ್ರಾಮಾಂತರ , ಕೋಲಾರ ಸೇರಿದಂತೆ  ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.  ಮಾವಿನ ದರ  ಕುಸಿದಿರುವುದು ಹಾಗೂ  ಆಂಧ್ರಕ್ಕೆ ಪೂರೈಕೆ ಮಾಡಲು  ನಿರ್ಬಂಧ  ಹೇರಿರುವುದರಿಂದ ರೈತರು ಕಂಗಾಲಾಗಿದ್ದಾರೆ.  ಮಾವು ಬೆಳೆಗಾರರಿಗೆ  ಕೇಂದ್ರದಿಂದ ಹೆಚ್ಚಿನ  ನೆರವನ್ನು ಪಡೆಯುವ ಜವಾಬ್ದಾರಿಯನ್ನು  ಕೃಷಿ ಸಚಿವ  ಚೆಲುವರಾಯಸ್ವಾಮಿ ಅವರಿಗೆ  ವಹಿಸಲಾಗಿದೆ  ಎಂದು ತಿಳಿಸಿದರು.

ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ  ಕೆಲಸ ಮಾಡುತ್ತಿರುವ ಸುಮಾರು 3ಲಕ್ಷ ಸಿಬ್ಬಂದಿ  ಮತ್ತು  ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ  ಟ್ರಸ್ಟ್ ಮೂಲಕ ವಾರ್ಷಿಕವಾಗಿ  5 ಲಕ್ಷ ರೂಪಾಯಿ ವರೆಗೆ ನಗದುರಹಿತ  ಆರೋಗ್ಯ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ  ಪ್ರಾಥಮಿಕ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು  18 ಕೋಟಿ 97 ಲಕ್ಷ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

7 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

7 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

8 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

8 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

8 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

18 hours ago