ರಾಜ್ಯದ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯ ನಂತರ ಅವರು, ಬೆಂಗಳೂರು ಗ್ರಾಮಾಂತರ , ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಮಾವಿನ ದರ ಕುಸಿದಿರುವುದು ಹಾಗೂ ಆಂಧ್ರಕ್ಕೆ ಪೂರೈಕೆ ಮಾಡಲು ನಿರ್ಬಂಧ ಹೇರಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಮಾವು ಬೆಳೆಗಾರರಿಗೆ ಕೇಂದ್ರದಿಂದ ಹೆಚ್ಚಿನ ನೆರವನ್ನು ಪಡೆಯುವ ಜವಾಬ್ದಾರಿಯನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂಪಾಯಿ ವರೆಗೆ ನಗದುರಹಿತ ಆರೋಗ್ಯ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಪ್ರಾಥಮಿಕ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು 18 ಕೋಟಿ 97 ಲಕ್ಷ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…