Advertisement
ಸುದ್ದಿಗಳು

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

Share

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು  ರಾಜ್ಯ ಸಚಿವ ಸಂಪುಟ  ತೀರ್ಮಾನಿಸಿದೆ ಎಂದು  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ  ಎಚ್.ಕೆ ಪಾಟೀಲ್  ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ  ಸಚಿವ ಸಂಪುಟದ ಸಭೆಯ ನಂತರ ಅವರು,  ಬೆಂಗಳೂರು ಗ್ರಾಮಾಂತರ , ಕೋಲಾರ ಸೇರಿದಂತೆ  ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.  ಮಾವಿನ ದರ  ಕುಸಿದಿರುವುದು ಹಾಗೂ  ಆಂಧ್ರಕ್ಕೆ ಪೂರೈಕೆ ಮಾಡಲು  ನಿರ್ಬಂಧ  ಹೇರಿರುವುದರಿಂದ ರೈತರು ಕಂಗಾಲಾಗಿದ್ದಾರೆ.  ಮಾವು ಬೆಳೆಗಾರರಿಗೆ  ಕೇಂದ್ರದಿಂದ ಹೆಚ್ಚಿನ  ನೆರವನ್ನು ಪಡೆಯುವ ಜವಾಬ್ದಾರಿಯನ್ನು  ಕೃಷಿ ಸಚಿವ  ಚೆಲುವರಾಯಸ್ವಾಮಿ ಅವರಿಗೆ  ವಹಿಸಲಾಗಿದೆ  ಎಂದು ತಿಳಿಸಿದರು.

ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ  ಕೆಲಸ ಮಾಡುತ್ತಿರುವ ಸುಮಾರು 3ಲಕ್ಷ ಸಿಬ್ಬಂದಿ  ಮತ್ತು  ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ  ಟ್ರಸ್ಟ್ ಮೂಲಕ ವಾರ್ಷಿಕವಾಗಿ  5 ಲಕ್ಷ ರೂಪಾಯಿ ವರೆಗೆ ನಗದುರಹಿತ  ಆರೋಗ್ಯ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ  ಪ್ರಾಥಮಿಕ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು  18 ಕೋಟಿ 97 ಲಕ್ಷ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

11 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

13 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

14 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

14 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

14 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

23 hours ago